Select Your Language

Notifications

webdunia
webdunia
webdunia
webdunia

ಎಲ್ಲಾ ರಾಜ್ಯಗಳ ಸಿಎಂಗಳ ಸಭೆ ಕರೆಯಲು ಪ್ರಧಾನಿಗೆ ಸಿಎಂ ಪತ್ರ

ಎಲ್ಲಾ ರಾಜ್ಯಗಳ ಸಿಎಂಗಳ ಸಭೆ ಕರೆಯಲು ಪ್ರಧಾನಿಗೆ ಸಿಎಂ ಪತ್ರ
ಬೆಂಗಳೂರು , ಶುಕ್ರವಾರ, 9 ಸೆಪ್ಟಂಬರ್ 2016 (15:21 IST)
ರಾಜ್ಯ ರಾಜ್ಯಗಳ ಮಧ್ಯೆ ನೀರಿನ ವಿವಾದಗಳು ಹೆಚ್ಚಾಗುತ್ತಿರುವುದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಸಿಎಂ ಸಿದ್ದರಾಮಯ್ಯ ಬಹಿರಂಗ ಪತ್ರ ಬರೆದಿದ್ದಾರೆ.  
 
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾದ ಹಿನ್ನೆಲೆಯಲ್ಲಿ, ಸಿಎಂ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ತಮಿಳುನಾಡು ಸರಕಾರ ಪದೇ ಪದೇ ಕಾವೇರಿ ನೀರಿಗಾಗಿ ಕ್ಯಾತೆ ತೆಗೆಯುತ್ತಿರುವುದರಿಂದ ಉಭಯ ರಾಜ್ಯಗಳ ಮಧ್ಯೆ ಸಂಘರ್ಷದ ವಾತಾವರಣ ಉಂಟಾಗುತ್ತಿದೆ. ಇದೇ ರೀತಿ ಮುಂದುವರಿದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
  
ರಾಜ್ಯದಲ್ಲಿ ಕಾವೇರಿ ವಿವಾದ, ಮಹದಾಯಿ ನದಿ ಯೋಜನೆ ವಿವಾದಗಳಿಂದ ರಾಜ್ಯದ ರೈತರು ಕಂಗೆಟ್ಟಿದ್ದು ಕೂಡಲೇ ಪ್ರಧಾನಿ ಮೋದಿ ಮಧ್ಯಪ್ರವೇಶಿಸಿ ಸಮಸ್ಯೆಗಳನ್ನು ಪರಿಹರಿಸುವುದು ಸೂಕ್ತ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಕ್ತ ಕೊಟ್ಟೇವು ನೀರು ಕೊಡಲ್ಲ ಎಂದು ಘೋಷಣೆ ಕೂಗಿ ಇರಿದುಕೊಂಡ ಯುವಕ