Select Your Language

Notifications

webdunia
webdunia
webdunia
webdunia

ಇಂದು ಸಿಎಂ ಸಿದ್ದು ಸರ್ಕಾರಕ್ಕೆ ನಾಲ್ಕು ವರ್ಷದ ಸಂಭ್ರಮ

ಇಂದು ಸಿಎಂ ಸಿದ್ದು ಸರ್ಕಾರಕ್ಕೆ ನಾಲ್ಕು ವರ್ಷದ ಸಂಭ್ರಮ
Bangalore , ಶನಿವಾರ, 13 ಮೇ 2017 (10:10 IST)
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇಂದು ನಾಲ್ಕು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಚಿತ್ರದುರ್ಗದಲ್ಲಿ ಇಂದು ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.

 
ಚಿತ್ರದುರ್ಗದ ವಿಜ್ಞಾನ ಕಾಲೇಜಿನ ಮೈದಾನದಲ್ಲಿ ಸೌಲಭ್ಯ ವಿತರಣೆಯೇ ಸಂಭ್ರಮ ಎನ್ನುವ ಹೆಸರಿನಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಹಲವು ಯೋಜನೆಗಳ ಘೋಷಣೆಯಾಗುವ ಸಾಧ್ಯತೆಯಿದೆ. 33 ಇಲಾಖೆಗಳ ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗುವುದು ಎಂದು ಕಾರ್ಯಕ್ರಮದ ಉಸ್ತುವಾರಿ ಹೊತ್ತುಕೊಂಡಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ. ತಮ್ಮ ಸಂಗಡಿಗರೊಂದಿಗೆ ಮೈದಾನದ ಸಿದ್ಧತೆಗಳ ಪರಿಶೀಲನೆ ನಡೆಸಿದ ನಂತರ ಸಚಿವರು ಸುದ್ದಿಗಾರರಿಗೆ ಇಂದಿನ ಕಾರ್ಯಕ್ರಮದ ವಿವರಣೆ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಪತಿಗೇ ತಲಾಖ್ ಕೊಟ್ಟ ಪತ್ನಿ! ಕಾರಣ ಇನ್ನೂ ಇಂಟರೆಸ್ಟಿಂಗ್!