Select Your Language

Notifications

webdunia
webdunia
webdunia
webdunia

ಸಿಎಂ ಮಹತ್ವದ ನಿರ್ಧಾರ: 600 ಭ್ರಷ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ

ಸಿಎಂ ಮಹತ್ವದ ನಿರ್ಧಾರ: 600 ಭ್ರಷ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ
ಲಕ್ನೋ , ಬುಧವಾರ, 3 ಜುಲೈ 2019 (20:23 IST)
ಭ್ರಷ್ಟಾಚಾರ ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ 600 ಕ್ಕೂ ಹೆಚ್ಚು ಸರಕಾರಿ ಅಧಿಕಾರಿಗಳ ಮೇಲೆ ಸಿಎಂ ಕಠಿಣ ಕ್ರಮ ಕೈಗೊಂಡಿದ್ದಾರೆ.

600 ಸರಕಾರಿ ನೌಕರರ ಮೇಲೆ ಕ್ರಮ ಹಾಗೂ 200 ಸಿಬ್ಬಂದಿಗಳನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಲಾಗಿದೆ. ಇಂಥದ್ದೊಂದು ದಿಟ್ಟ ಕ್ರಮವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೈಗೊಂಡಿದ್ದಾರೆ.

ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಹಾಗೂ ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ವರ್ಗಾವಣೆ, ಅವರ ಭವಿಷ್ಯದ ಬಡ್ತಿಗಳನ್ನು ತಡೆಹಿಡಿಯುವುದು ಸೇರಿದಂತೆ ಇನ್ನಿತರ ಕ್ರಮ ಕೈಗೊಳ್ಳಲಾಗಿದೆ.

ಯುಪಿ ಸರಕಾರವು 50 ವರ್ಷಕ್ಕಿಂತ ಮೇಲ್ಪಟ್ಟ ಭ್ರಷ್ಟ ಹಾಗೂ ಕೆಲಸ ಮಾಡದ ಪೊಲೀಸ್ ಹಿರಿಯ ಅಧಿಕಾರಿಗಳನ್ನು ಬಲವಂತವಾಗಿ ನಿವೃತ್ತಿ ಮಾಡಲು ಮುಂದಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಡಿಸಿ, ಸಿಇಓ ಹಳ್ಳಿ ಪ್ರವಾಸ ಮಾಡೋದು ಕಡ್ಡಾಯ ಎಂದ ಸಚಿವ