Select Your Language

Notifications

webdunia
webdunia
webdunia
webdunia

ಸಿಎಂ ಪುತ್ರ ರಾಕೇಶ್ ವಿರುದ್ಧ ಫೇಸ್‌ಬುಕ್ ಪೋಸ್ಟ್: ಇಬ್ಬರ ವಿರುದ್ಧ ಎಫ್‌ಐಆರ್ ದಾಖಲು

ಸಿಎಂ ಪುತ್ರ ರಾಕೇಶ್ ವಿರುದ್ಧ ಫೇಸ್‌ಬುಕ್ ಪೋಸ್ಟ್: ಇಬ್ಬರ ವಿರುದ್ಧ ಎಫ್‌ಐಆರ್ ದಾಖಲು
ರಾಯಚೂರು , ಬುಧವಾರ, 3 ಆಗಸ್ಟ್ 2016 (10:04 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಷ್ಠಪುತ್ರ ರಾಕೇಶ್ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಇಬ್ಬರ ಯುವಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಿಎಂ ಪುತ್ರ ರಾಕೇಶ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಲಿಂಗಸೂರಿನ  ನವೀನ್ ಹಾಗೂ ಶರಣಬಸಪ್ಪ ವಿರುದ್ಧ ರಾಯಚೂರ ಜಿಲ್ಲೆಯ ಲಿಂಗಸೂರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಸೆನ್ 504 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 
 
ಇತ್ತೀಚೆಗಷ್ಟೇ ಜುಲೈ 13 ರಂದು 39 ನೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ ರಾಕೇಶ್ ಸಿದ್ದರಾಮಯ್ಯ, ಸ್ನೇಹಿತರೊಂದಿಗೆ ಬೆಲ್ಜಿಯಂ ಪ್ರವಾಸ ಕೈಗೊಂಡಿದ್ದರು. ಬೆಲ್ಜಿಯಂ ಪ್ರವಾಸಕ್ಕೆ ತೆರಳುವ ಮುನ್ನವೆ ಯಕೃತ್‌ (ಲಿವರ್‌) ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರವಾಸದ ವೇಳೆ ಅವರ ಆರೋಗ್ಯ ಹದಗೆಟ್ಟಿತ್ತು. ಅವರನ್ನು ಬ್ರೂಸೆಲ್ಸ್ ಯೂನಿವರ್ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ಸಿಎಂ ಆಯ್ಕೆಗೆ ಬಿಜೆಪಿಯಲ್ಲಿ ಕಸರತ್ತು