Select Your Language

Notifications

webdunia
webdunia
webdunia
webdunia

ಕೊವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ- ನಾಡಿನ ಜನತೆಗೆ ಸಿಎಂ ಮನವಿ

ಕೊವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ- ನಾಡಿನ ಜನತೆಗೆ ಸಿಎಂ ಮನವಿ
ಬೆಂಗಳೂರು , ಭಾನುವಾರ, 25 ಅಕ್ಟೋಬರ್ 2020 (10:23 IST)
ಬೆಂಗಳೂರು : ದಸರಾ ಹಬ್ಬದ ಹಿನ್ನಲೆಯಲ್ಲಿ ಸಮಸ್ತ ನಾಡಿನ ಜನತೆಗೆ ಸಿಎಂ ಬಿಎಸ್ ಯಡಿಯೂರಪ್ಪ ದಸರಾ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಎಲ್ಲರ ಬಾಳಲ್ಲಿ ಸುಖ ಶಾಂತಿ ನೆಲೆಸಲಿ. ಕೊವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ. ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಮಾಡಿ ಎಂದು ಸಿಎಂ ಮನವಿ ಮಾಡಿದ್ದಾರೆ.  ಹಾಗೇ ಆರ್.ಆರ್ ನಗರ ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ನಾನು ಹೋಗಲ್ಲ. ಆದ್ರೆ 1ದಿನ ಶಿರಾಗೆ ಪ್ರಚಾರಕ್ಕೆ ಹೋಗುವೆ. ಅ.30ರಂದು ಶಿರಾದಲ್ಲಿ ಪ್ರಚಾರ ಮಾಡ್ತೇನೆ ಎಂದು ತಿಳಿಸಿದ್ದಾರೆ.

ನಿನ್ನೆ ಬೆಂಗಳೂರಿನ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ. ಹಾನಿಯಾದ ಮನೆಗಳಿಗೆ ಪರಿಹಾರ ನೀಡಿದ್ದೇನೆ. ತಲಾ 25 ಸಾವಿರ ರೂ. ಪರಿಹಾರ ನೀಡಿದ್ದೇನೆ. ಅಗತ್ಯವಿದ್ರೆ ನೆರೆ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ ಎಂಬುದಾಗಿ ಅವರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಣ ಖರ್ಚು ಮಾಡಿ ಡಿಕೆ ಶಿವಕುಮಾರ್ ಚುನಾವಣೆ ಗೆಲ್ಲಿಸ್ತಾರೆ ಎಂದ ಕಾಂಗ್ರೆಸ್ ನಾಯಕ