Publish Date: Wed, 09 Sep 2020 (13:08 IST)
Updated Date: Wed, 09 Sep 2020 (13:12 IST)
ಬೆಂಗಳೂರು : ಬೆಂಗಳೂರಿನಲ್ಲಿ ಮಳೆಯಿಂದ ಹಾನಿ ಸಂಭವಿಸಿದ ಹಿನ್ನಲೆಯಲ್ಲಿ ಬಿಬಿಎಂಪಿ ಆಯುಕ್ತರಿಗೆ ,ಸಚಿವ, ಶಾಸಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಬಿಸಿ ಮುಟ್ಟಿಸಿದ್ದಾರೆ.
ಬೆಂಗಳೂರು ಮಳೆ ಬಗ್ಗೆ ಬಿಬಿಎಂಪಿ ಆಯುಕ್ತರಿಂದ ಮಾಹಿತಿ ಪಡೆದ ಸಿಎಂ ಬಿಬಿಎಂಪಿ ಆಯುಕ್ತರಿಗೆ ತಾಕೀತು ಮಾಡಿದ್ದಾರೆ. ಕೂಡಲೇ ಮಳೆ ಪೀಡಿತ ಸ್ಥಳಗಳಿಗೆ ಹೋಗಿ ಸಂತ್ರಸ್ತರ ಸಮಸ್ಯೆ ಆಲಿಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.