Webdunia - Bharat's app for daily news and videos

Install App

ಚಿಕ್ಕಬಳ್ಳಾಪುರ ಜಿಲ್ಲೆಗೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಿದ್ರಾ ಸಿಎಂ?

Webdunia
ಮಂಗಳವಾರ, 10 ಸೆಪ್ಟಂಬರ್ 2019 (11:35 IST)
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಕೆಗಳಿಗೆ ಅನುದಾನ ಕಡಿತ ಹಿನ್ನಲೆ ಸಿಎಂ ಬಿಎಸ್ ವೈ ವಿರುದ್ಧ ಜೆಡಿಎಸ್, ಕಾಂಗ್ರೆಸ್ ಶಾಸಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ 6 ತಾಲೂಕುಗಳ ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ಇದೀಗ 6 ತಾಲೂಕುಗಳ ಪೈಕಿ ಒಂದು ತಾಲೂಕಿಗೆ ಅನುದಾನ ನೀಡುವುದರ ಮೂಲಕ ಸಿಎಂ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ಸಿಎಂ ಬಿಎಸ್ ವೈ ವಿರುದ್ಧ ಜೆಡಿಎಸ್, ಕಾಂಗ್ರೆಸ್ ಶಾಸಕರು ಕಿಡಿಕಾರಿದ್ದಾರೆ.


ರಾಜ್ಯ ಸರ್ಕಾರ, ಚಿಕ್ಕಬಳ್ಳಾಪುರ ತಾಲೂಕಿಗೆ 95 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಉಳಿದ ತಾಲೂಕುಗಳಿಗೆ ಬಿಡುಗಡೆಯಾಗಿದ್ದ 252 ಕೋಟಿ ರೂ ಅನುದಾನ ಸ್ಥಗಿತ ಮಾಡಲಾಗಿದೆ. ಬಾಗೇಪಲ್ಲಿ ಕ್ಷೇತ್ರಕ್ಕೆ ನೀಡಿದ್ದ 105 ಕೋಟಿಯಲ್ಲಿ 19 ಕೋಟಿ ರೂ. ಹಿಂಪಡೆಯಲಾಗಿದೆ. ಶಿಡ್ಲಘಟ್ಟ ಕ್ಷೇತ್ರಕ್ಕೆ ನೀಡಿದ್ದ 71ಕೋಟಿ ರೂ ಅನುದಾನ ಸ್ಥಗಿತ, ಚಿಂತಾಮಣಿ ಕ್ಷೇತ್ರಕ್ಕೆ ನೀಡಿದ್ದ 60 ಕೋಟಿ ಅನುದಾನ ಸ್ಥಗಿತ, ಗೌರಿ ಬಿದನೂರು  ಕ್ಷೇತ್ರಕ್ಕೆ ನೀಡಿದ್ದ 16 ಕೋಟಿ ಅನುದಾನ ಸ್ಥಗಿತ ಮಾಡಲಾಗಿದೆ. ಆದರೆ ಅನರ್ಹ ಶಾಸಕ ಕೆ,ಸುಧಾಕರ್ ಕ್ಷೇತ್ರಕ್ಕೆ ಮಾತ್ರ ಅನುದಾನ ಸ್ಥಗಿತಗೊಳಿಸಿಲ್ಲ ಎಂದು ಆರೋಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments