Webdunia - Bharat's app for daily news and videos

Install App

ಚಿಕ್ಕಬಳ್ಳಾಪುರ ಜಿಲ್ಲೆಗೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಿದ್ರಾ ಸಿಎಂ?

Webdunia
ಮಂಗಳವಾರ, 10 ಸೆಪ್ಟಂಬರ್ 2019 (11:35 IST)
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಕೆಗಳಿಗೆ ಅನುದಾನ ಕಡಿತ ಹಿನ್ನಲೆ ಸಿಎಂ ಬಿಎಸ್ ವೈ ವಿರುದ್ಧ ಜೆಡಿಎಸ್, ಕಾಂಗ್ರೆಸ್ ಶಾಸಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ 6 ತಾಲೂಕುಗಳ ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ಇದೀಗ 6 ತಾಲೂಕುಗಳ ಪೈಕಿ ಒಂದು ತಾಲೂಕಿಗೆ ಅನುದಾನ ನೀಡುವುದರ ಮೂಲಕ ಸಿಎಂ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ಸಿಎಂ ಬಿಎಸ್ ವೈ ವಿರುದ್ಧ ಜೆಡಿಎಸ್, ಕಾಂಗ್ರೆಸ್ ಶಾಸಕರು ಕಿಡಿಕಾರಿದ್ದಾರೆ.


ರಾಜ್ಯ ಸರ್ಕಾರ, ಚಿಕ್ಕಬಳ್ಳಾಪುರ ತಾಲೂಕಿಗೆ 95 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಉಳಿದ ತಾಲೂಕುಗಳಿಗೆ ಬಿಡುಗಡೆಯಾಗಿದ್ದ 252 ಕೋಟಿ ರೂ ಅನುದಾನ ಸ್ಥಗಿತ ಮಾಡಲಾಗಿದೆ. ಬಾಗೇಪಲ್ಲಿ ಕ್ಷೇತ್ರಕ್ಕೆ ನೀಡಿದ್ದ 105 ಕೋಟಿಯಲ್ಲಿ 19 ಕೋಟಿ ರೂ. ಹಿಂಪಡೆಯಲಾಗಿದೆ. ಶಿಡ್ಲಘಟ್ಟ ಕ್ಷೇತ್ರಕ್ಕೆ ನೀಡಿದ್ದ 71ಕೋಟಿ ರೂ ಅನುದಾನ ಸ್ಥಗಿತ, ಚಿಂತಾಮಣಿ ಕ್ಷೇತ್ರಕ್ಕೆ ನೀಡಿದ್ದ 60 ಕೋಟಿ ಅನುದಾನ ಸ್ಥಗಿತ, ಗೌರಿ ಬಿದನೂರು  ಕ್ಷೇತ್ರಕ್ಕೆ ನೀಡಿದ್ದ 16 ಕೋಟಿ ಅನುದಾನ ಸ್ಥಗಿತ ಮಾಡಲಾಗಿದೆ. ಆದರೆ ಅನರ್ಹ ಶಾಸಕ ಕೆ,ಸುಧಾಕರ್ ಕ್ಷೇತ್ರಕ್ಕೆ ಮಾತ್ರ ಅನುದಾನ ಸ್ಥಗಿತಗೊಳಿಸಿಲ್ಲ ಎಂದು ಆರೋಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments