Select Your Language

Notifications

webdunia
webdunia
webdunia
webdunia

ಆತ್ಮಹತ್ಯೆ ಮಾಡಿಕೊಂಡ ರೈತ ಸುರೇಶ್ ನಿವಾಸಕ್ಕೆ ಇಂದು ಸಿಎಂ ಭೇಟಿ

ಆತ್ಮಹತ್ಯೆ ಮಾಡಿಕೊಂಡ ರೈತ ಸುರೇಶ್ ನಿವಾಸಕ್ಕೆ ಇಂದು ಸಿಎಂ ಭೇಟಿ
ಮಂಡ್ಯ , ಮಂಗಳವಾರ, 18 ಜೂನ್ 2019 (10:11 IST)
ಮಂಡ್ಯ :  ನಿನ್ನೆ ಹಾಗೂ ಇಂದು ಸ್ವಕ್ಷೇತ್ರದಲ್ಲಿ ಜನತಾ ದರ್ಶನ ಮಾಡುತ್ತಿರುವ ಸಿಎಂ ಕುಮಾರಸ್ವಾಮಿ ಇಂದು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೆಆರ್ ಪೇಟೆ ತಾಲೂಕು ಅಘಲಯ ಗ್ರಾಮದ ಸುರೇಶ್ ಅವರ  ನಿವಾಸಕ್ಕೆ ಭೇಟಿ ನೀಡಲಿದ್ದಾರೆ.




ಅಘಲು ಗ್ರಾಮದಲ್ಲಿ ಮೃತ ರೈತ ಸುರೇಶ್ ಭಾನುವಾರ ಬೆಳಗ್ಗೆ, ವಿಡಿಯೋವೊಂದನ್ನು ಮಾಡಿ  ಈ ಭಾಗದ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿ ಅದನ್ನು ಬಗೆಹರಿಸುವಂತೆ ಮನವಿ ಮಾಡಿಕೊಂಡು ನಂತರ ಜಮೀನಿನ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅಲ್ಲದೇ ತನ್ನ ಅಂತ್ಯಸಂಸ್ಕಾರಕ್ಕೆ ಮುಖ್ಯಮಂತ್ರಿ ಬರಬೇಕೆಂದು ಮನವಿ ಕೂಡ ಮಾಡಿಕೊಂಡಿದ್ದರು.


ಈ ಹಿನ್ನಲೆಯಲ್ಲಿ ಇದೀಗ ಅಘಲು ಗ್ರಾಮಕ್ಕೆ ಇಂದು ಭೇಟಿ ನೀಡಲಿರುವ ಸಿಎಂ ಮೃತ ರೈತ ರಮೇಶ್ ಅವರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ಹಾಗೇ ಸಂತೆಬಾಚಳ್ಳಿ ಹೋಬಳಿಯ ಕೆರೆಗಳಿಗೆ ನೀರು ತುಂಬಿಸುವ ವಿಚಾರವಾಗಿ ಸ್ಥಳೀಯ ರೈತರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ದಿನೇಶ್ ಅವರು ತಿಳಿಸಿದ್ದಾರೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಸಂಸತ್ತಿನಲ್ಲಿ ಮೊದಲ ದಿನ ಸುಮಲತಾ ಅಂಬರೀಶ್ ಗೆ ಭರ್ಜರಿ ಸ್ವಾಗತ