Webdunia - Bharat's app for daily news and videos

Install App

ಆತ್ಮಹತ್ಯೆ ಮಾಡಿಕೊಂಡ ರೈತ ಸುರೇಶ್ ನಿವಾಸಕ್ಕೆ ಇಂದು ಸಿಎಂ ಭೇಟಿ

Webdunia
ಮಂಗಳವಾರ, 18 ಜೂನ್ 2019 (10:11 IST)
ಮಂಡ್ಯ :  ನಿನ್ನೆ ಹಾಗೂ ಇಂದು ಸ್ವಕ್ಷೇತ್ರದಲ್ಲಿ ಜನತಾ ದರ್ಶನ ಮಾಡುತ್ತಿರುವ ಸಿಎಂ ಕುಮಾರಸ್ವಾಮಿ ಇಂದು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೆಆರ್ ಪೇಟೆ ತಾಲೂಕು ಅಘಲಯ ಗ್ರಾಮದ ಸುರೇಶ್ ಅವರ  ನಿವಾಸಕ್ಕೆ ಭೇಟಿ ನೀಡಲಿದ್ದಾರೆ.




ಅಘಲು ಗ್ರಾಮದಲ್ಲಿ ಮೃತ ರೈತ ಸುರೇಶ್ ಭಾನುವಾರ ಬೆಳಗ್ಗೆ, ವಿಡಿಯೋವೊಂದನ್ನು ಮಾಡಿ  ಈ ಭಾಗದ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿ ಅದನ್ನು ಬಗೆಹರಿಸುವಂತೆ ಮನವಿ ಮಾಡಿಕೊಂಡು ನಂತರ ಜಮೀನಿನ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅಲ್ಲದೇ ತನ್ನ ಅಂತ್ಯಸಂಸ್ಕಾರಕ್ಕೆ ಮುಖ್ಯಮಂತ್ರಿ ಬರಬೇಕೆಂದು ಮನವಿ ಕೂಡ ಮಾಡಿಕೊಂಡಿದ್ದರು.


ಈ ಹಿನ್ನಲೆಯಲ್ಲಿ ಇದೀಗ ಅಘಲು ಗ್ರಾಮಕ್ಕೆ ಇಂದು ಭೇಟಿ ನೀಡಲಿರುವ ಸಿಎಂ ಮೃತ ರೈತ ರಮೇಶ್ ಅವರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ಹಾಗೇ ಸಂತೆಬಾಚಳ್ಳಿ ಹೋಬಳಿಯ ಕೆರೆಗಳಿಗೆ ನೀರು ತುಂಬಿಸುವ ವಿಚಾರವಾಗಿ ಸ್ಥಳೀಯ ರೈತರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ದಿನೇಶ್ ಅವರು ತಿಳಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments