Webdunia - Bharat's app for daily news and videos

Install App

ಸಿಎಂ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದರು: ಬಿಎಸ್‌ವೈ ವ್ಯಂಗ್ಯ

Webdunia
ಗುರುವಾರ, 26 ಮಾರ್ಚ್ 2015 (13:12 IST)
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವು ಪ್ರಕರಣವನ್ನು ಮುಖ್ಯಮಂತ್ರಿಗಳು ಸಿಬಿಐಗೆ ವಹಿಸದೆ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದರು ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇಂದು ಛೇಡಿಸಿದ್ದಾರೆ. 
 
ಮಾಧ್ಯಮಗಲೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳು ಸರ್ಕಾಧಿಕಾರಿಯಾಗಿ ವರ್ತಿಸುತ್ತಿದ್ದರು. ಈ ಹಿನ್ನೆಲೆಯಲ್ಲಿಯೇ ರಾಜ್ಯದ ಜನರು ಸರ್ಕಾರಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ಅಲ್ಲದೆ ರಾಜ್ಯದ ಬಿಜೆಪಿ ಘಟಕದ ಸದಸ್ಯರು ಗೃಹ ಸಚಿವರ ರಾಜೀನಾಮೆಗಾಗಿ ಆಗ್ರಹಿಸುತ್ತಿದ್ದಾರೆ ಎಂದರು. 
 
ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂಬುದು ರಾಜ್ಯದ ಜನರ ಒಕ್ಕೊರಲಿನ ಬೇಡಿಕೆಯಾಗಿತ್ತು. ಅಲ್ಲದೆ ಸತತವಾಗಿ ಏಳು ದಿನಗಳ ಕಾಲ ರಾಜ್ಯಾದ್ಯಂತ ಪ್ರತಿಭಟನೆ ನಡೆದಿತ್ತು. ಆದರೆ ಸಿಎಂ ಸಿದ್ದರಾಮಯ್ಯನವರು ಪ್ರಕರಣ ನಡೆದು ಒಂದು ವಾರ ಙರುಳಿದ ಬಳಿಕ ಕಳೆದ ಸೋಮವಾರ ಸಿಬಿಐಗೆ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments