Webdunia - Bharat's app for daily news and videos

Install App

ಸ್ಥಳ ಪರಿಶೀಲನೆ ಮಾಡಿದ ಸಿಎಂ?

Webdunia
ಶನಿವಾರ, 18 ಜೂನ್ 2022 (14:21 IST)
ಬೆಂಗಳೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೂನ್ 21, 22ರಂದು ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು,

ರಾಜ್ಯಕ್ಕೆ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಯಶಸ್ವಿಗೊಳಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರಿಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಕೊಮ್ಮಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿರುವ ಸಾರ್ವಜನಿಕ ಸಭೆಯ ವೇದಿಕೆ ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 

ಜೂನ್ 20 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಅವರ ಕಾರ್ಯಕ್ರಮ ಪಟ್ಟಿ ಬಂದಿದೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕೆಂಬ ಉದ್ದೇಶದಿಂದ ನಮ್ಮೆಲ್ಲಾ ಸಚಿವ ಸಂಪುಟದ ಸಹೋದ್ಯೋಗಿಗಳು, ಹಿರಿಯ ನಾಯಕ ಸದಾನಂದಗೌಡರು, ಎಲ್ಲಾ ಶಾಸಕರು ಶ್ರಮವಹಿಸುತ್ತಿದ್ದಾರೆ.

ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಿ ಕೈ ಜೋಡಿಸಿದ್ದಾರೆ. ಬಿಬಿಎಂಪಿ, ಬಿಡಿಎ, ಜಿಲ್ಲಾಧಿಕಾರಿಗಳು ಮತ್ತು ಭದ್ರತಾ ದೃಷ್ಟಿಯಿಂದ ಕರ್ನಾಟಕ ಪೊಲೀಸ್, ಬೆಂಗಳೂರು ಆಯುಕ್ತರು ಸೇರಿದಂತೆ ಎಲ್ಲರೂ ಸ್ಥಳ ಪರಿಶೀಲನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments