Webdunia - Bharat's app for daily news and videos

Install App

ತನ್ನ ವಿರುದ್ಧ ಹೇಳಿಕೆ ನೀಡಿದ ಎಸ್‍ಎಂ ಕೃಷ್ಣ ಮತ್ತು ಸುಮಲತಾಗೆ ಟ್ವೀಟರ್ ನಲ್ಲಿ ತಿರುಗೇಟು ನೀಡಿದ ಸಿಎಂ

Webdunia
ಶನಿವಾರ, 16 ಮಾರ್ಚ್ 2019 (08:24 IST)
ಬೆಂಗಳೂರು : ತನ್ನ ವಿರುದ್ಧ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣ ಮತ್ತು ಸುಮಲತಾ ಅವರಿಗೆ ಸಿಎಂ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ.


 ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣ ವಿರುದ್ಧ ಕಿಡಿಕಾರಿದ ಸಿಎಂ ಅವರು,’ 50 ವರ್ಷ ಕಾಲ ನೀವು ಅಧಿಕಾರದ ಬೆಣ್ಣೆಯನ್ನು ಸಾಕಷ್ಟು ಮೆದ್ದಿರಿ. ಎರಡು ಬಾರಿ ಕೇಂದ್ರ ಸಚಿವರಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ, ಉಪ ಮುಖ್ಯಮಂತ್ರಿಯಾಗಿ, ಪಕ್ಕದ ರಾಜ್ಯದಲ್ಲಿ ರಾಜ್ಯಪಾಲರಾಗಿ ಅಧಿಕಾರ ಅನುಭವಿಸಿದಿರಿ. ಇಷ್ಟೆಲ್ಲ ಆದಮೇಲೆ ನೀವು ಬಿಜೆಪಿಗೆ ಕಾಲಿಟ್ಟಾಗಲೇ ಟೀಕಿಸುವ ನೈತಿಕತೆಯನ್ನು ಕಳೆದುಕೊಂಡಿದ್ದೀರಿ’.


‘ಕುಟುಂಬ ರಾಜಕಾರಣವನ್ನು ಪ್ರಶ್ನೆ ಮಾಡಿದ್ದೀರಿ ಬಹಳ ಸಂತೋಷ. ಆದರೆ ನಮ್ಮ ಕುಟುಂಬದಲ್ಲಿ ಯಾರೂ ಹಿಂಬಾಗಿಲ ಪ್ರವೇಶ ಪಡೆದಿಲ್ಲ. ಜನ ಆರಿಸಿದಾಗ ಮಾತ್ರ ಅಧಿಕಾರ ಪಡೆದಿದ್ದಾರೆ. ಆದರೆ ನೀವು ರಾಜ್ಯಸಭೆಗೆ ಹಿಂಬಾಗಿಲ ಮೂಲಕ ಪ್ರವೇಶ ಪಡೆಯಲು ದೇವೇಗೌಡರ ಸಹಾಯ ಪಡೆದದ್ದು ನೆನಪಿದೆ ಎಂದು ಭಾವಿಸುತ್ತೇನೆ’ ಎಂದು ಟ್ವೀಟ್ ಮಾಡಿ  ತಿರುಗೇಟು ನೀಡಿದ್ದಾರೆ.


ಹಾಗೇ ಸುಮಲತಾ ಅವರ ಕುರಿತು ಟ್ವೀಟ್ ಮಾಡಿದ ಅವರು,’ ನಿಮ್ಮ ರೈತಪರ ಮಾತು ಓದಿ ಇನ್ನಿಲ್ಲದಷ್ಟು ಸಂತೋಷವಾಯಿತು. ನನಗಾಗಲೀ ನನ್ನ ತಂದೆಯವರಿಗಾಗಲೀ ರೈತರ ಬಗ್ಗೆ ಏನೇನೂ ಗೊತ್ತಿಲ್ಲ. ಮಣ್ಣಿನ ಮಕ್ಕಳು ಎಂದು ಈ ದೇಶದ ಜನ ಪ್ರೀತಿಯಿಂದ ಕರೆದರು. ನಮ್ಮದು ರೈತರಿಗೆ ಮಿಡಿದ ಮನ. ಆದರೆ ಈಗ ದಿಢೀರನೆ ಪ್ರತ್ಯಕ್ಷರಾಗಿ ಪ್ರತೀ ದಿನ ಹೊಲ ಗದ್ದೆಗಳಲ್ಲಿ ದುಡಿದು, ಉತ್ತು ಬಿತ್ತಿದ ಅನುಭವ ಹಂಚಿಕೊಳ್ಳುತ್ತಿದ್ದೀರಿ. ರೈತರನ್ನು ಉದ್ಧಾರ ಮಾಡಲು ನಿಮ್ಮ ಸಲಹೆ ತುಂಬಾ ಮುಖ್ಯ ಕೇಳಲು ನಾವು ಕಾತರರಾಗಿದ್ದೇವೆ’ ಎಂದು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments