Webdunia - Bharat's app for daily news and videos

Install App

ಮಂಗಳೂರಿನಲ್ಲಿ ಎನ್ಐಎ ಕಚೇರಿ ಸ್ಥಾಪನೆ ಸುಳಿವು ನೀಡಿದ ಸಿಎಂ

Webdunia
ಶನಿವಾರ, 14 ಆಗಸ್ಟ್ 2021 (09:10 IST)
ಮಂಗಳೂರು (ಆ.14):  ರಾಷ್ಟ್ರೀಯ ತನಿಖಾದಳ (ಎನ್ಐಎ) ಕಚೇರಿಯನ್ನು ಮಂಗಳೂರಿನಲ್ಲಿ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿ ಸುಳಿವು ನೀಡಿದ್ದಾರೆ. ಎನ್ಐಎ ಕಚೇರಿ ಸ್ಥಾಪನೆ ಬಗ್ಗೆ ರಾಜ್ಯ ಗೃಹಸಚಿವರು ಶೀಘ್ರವೇ ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದಿದ್ದಾರೆ.

ಎರಡು ದಿನಗಳ ಅವಿಭಜಿತ ದ.ಕ. ಜಿಲ್ಲೆ ಭೇಟಿ ಮುಕ್ತಾಯಗೊಳಿಸಿದ ಬಳಿಕ ಶುಕ್ರವಾರ ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಮಂಗಳೂರಿನ ಸಕ್ರ್ಯೂಟ್ ಹೌಸ್ನಲ್ಲಿ ಸುದ್ದಿಗಾರರಲ್ಲಿ ಮಾತನಾಡಿದರು.
ರಾಜ್ಯ ಸರ್ಕಾರ ಓರ್ವ ದಕ್ಷ ಗೃಹಸಚಿವರನ್ನು ಹೊಂದಿದೆ. ಅಧಿಕಾರ ಸ್ವೀಕರಿಸಿದ ಬಳಿಕ ಎರಡು ಸಭೆಗಳನ್ನು ನಡೆಸಿ ವರದಿ ಪಡೆದುಕೊಂಡಿದ್ದಾರೆ. ಸದ್ಯದಲ್ಲೇ ಮಂಗಳೂರಿಗೆ ಆಗಮಿಸಿ ಇಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲಿಸಲಿದ್ದಾರೆ. ಆ ಬಳಿಕ ನಾವೆಲ್ಲರೂ ಸೇರಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಎನ್ಐಎ ಕಚೇರಿ ಸ್ಥಾಪನೆ ದಿಕ್ಕಿನಲ್ಲಿ ಈಗಾಗಲೇ ಕೆಲವು ಹೆಜ್ಜೆಗಳನ್ನು ಇರಿಸಿದ್ದೇವೆ. ಆದರೆ ಇದನ್ನು ಬಹಿರಂಗಪಡಿಸಲಾಗುವುದಿಲ್ಲ, ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದರು.
ಸಕ್ರ್ಯೂಟ್ ಹೌಸ್ನಲ್ಲಿ ಸುಮಾರು ಅರ್ಧ ಗಂಟೆ ಕಾಲ ಪಕ್ಷ ಮುಖಂಡರು, ಶಾಸಕರೊಂದಿಗೆ ಚರ್ಚಿಸಿದ ಬಳಿಕ ಸಿಎಂ ಬೊಮ್ಮಾಯಿ ಅವರು ವಿಮಾನ ನಿಲ್ದಾಣಕ್ಕೆ ತೆರಳಿ ಬೆಂಗಳೂರಿಗೆ ನಿರ್ಗಮಿಸಿದರು.
ಶುಕ್ರವಾರ ಕೋವಿಡ್ ಹಿನ್ನೆಲೆಯಲ್ಲಿ ಗಡಿಪ್ರದೇಶ ಭದ್ರತೆ ಪರಿಶೀಲಿಸಲು ತಲಪಾಡಿಗೆ ಭೇಟಿ ನೀಡಬೇಕಾಗಿದ್ದ ಸಿಎಂ ಅವರ ಕಾರ್ಯಕ್ರಮವನ್ನು ಗುರುವಾರವೇ ರದ್ದುಪಡಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments