Select Your Language

Notifications

webdunia
webdunia
webdunia
webdunia

ನಾಳೆ ಮಧ್ಯಾಹ್ನ 3.30ಕ್ಕೆ ವೈದ್ಯಾಧಿಕಾರಿಗಳ ಜೊತೆ ಸಿಎಂ ಸಭೆ

ನಾಳೆ ಮಧ್ಯಾಹ್ನ 3.30ಕ್ಕೆ ವೈದ್ಯಾಧಿಕಾರಿಗಳ ಜೊತೆ ಸಿಎಂ ಸಭೆ
ಬೆಂಗಳೂರು , ಮಂಗಳವಾರ, 28 ಅಕ್ಟೋಬರ್ 2014 (12:46 IST)
ಇಂದು ವೈದ್ಯರ ಜೊತೆ ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಸಭೆ ರದ್ದಾಗಿದ್ದು, ನಾಳೆ ಮಧ್ಯಾಹ್ನ 3.30ಕ್ಕೆ ಸರ್ಕಾರಿ ವೈದ್ಯಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಸರ್ಕಾರಿ ವೈದ್ಯರು ಅಸಾಧ್ಯವಾದ ಬೇಡಿಕೆಗಳನ್ನು ಇಟ್ಟಿಲ್ಲ. ನಾಳಿನ ಸಭೆಯಲ್ಲಿ ಅವರೆಲ್ಲಾ ಬೇಡಿಕೆಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

ರೋಗಿಗಳಿಗೆ ತೊಂದರೆಯಾಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ವೈದ್ಯರು ಭರವಸೆ ನೀಡಿದ್ದಾರೆಂದು ಸಿಎಂ ಹೇಳಿದರು. ಈ ನಡುವೆ ವೈದ್ಯರ ರಾಜೀನಾಮೆಯನ್ನು ಅಂಗೀಕಾರ ಮಾಡುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ವೈದ್ಯರು ಮುಷ್ಕರ ಕೈಬಿಟ್ಟು ಮಾತುಕತೆಗೆ ಬರಲಿ ಎಂದು ಸಿಎಂ ಹೇಳಿದರು.  ವೈದ್ಯರು ಸರ್ಕಾರವನ್ನು ದೂಷಿಸುವುದು ಸರಿಯಲ್ಲ.

ಸಾರ್ವಜನಿಕರು ವೈದ್ಯರನ್ನು ಅಷ್ಟೇ ದೂಷಿಸುತ್ತಿದ್ದಾರೆ ಎಂದು ಸಿಎಂ ಹೇಳಿದರು. ಸಮಸ್ಯೆಯನ್ನು ಶೀಘ್ರವೇ ಬಗೆಹರಿಸುತ್ತೇವೆ ಎಂದೂ ಸಿಎಂ ಹೇಳಿದರು. ಏತನ್ಮಧ್ಯೆ ಇಂದು ಸೇವೆಗೆ ಹಾಜರಾಗದ ವೈದ್ಯರಿಗೆ ನೋಟಿಸ್ ಜಾರಿ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. 

Share this Story:

Follow Webdunia kannada