Publish Date: Sun, 26 Jul 2020 (18:06 IST)
Updated Date: Sun, 26 Jul 2020 (18:08 IST)
ರಾಜ್ಯದಲ್ಲಿ ಮತ್ತೊಂದು ವಿಮಾನ ನಿಲ್ದಾಣ ಕಾಮಗಾರಿಗೆ ಸಿಎಂ ಯಡಿಯೂರಪ್ಪ ಚಾಲನೆ ಕೊಡಲು ಸಿದ್ಧರಾಗಿದ್ದಾರೆ.
ವಿಮಾನ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ವಿಜಯಪುರ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ಮಾಡಿ ಮಾತನಾಡಿ, ವಿಶ್ವಪರಂಪರೆ ತಾಣ, ಶೈಕ್ಷಣಿಕ, ತೋಟಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶೇಷ ಛಾಪನ್ನು ಹೊಂದಿರುವ ಈ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿಸುವುದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ನಮ್ಮೆಲ್ಲರ ಆಶಯವಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದಿದ್ದಾರೆ.