Select Your Language

Notifications

webdunia
webdunia
webdunia
webdunia

ರೈತರ ಸಂಪೂರ್ಣ ಸಾಲ ಮನ್ನಾ ಇಲ್ಲ-ರೈತರಿಗೆ ಬಿಗ್ ಶಾಕ್ ನೀಡಿದ ಬಿಎಸ್ ವೈ

ರೈತರ ಸಂಪೂರ್ಣ ಸಾಲ ಮನ್ನಾ ಇಲ್ಲ-ರೈತರಿಗೆ ಬಿಗ್ ಶಾಕ್ ನೀಡಿದ ಬಿಎಸ್ ವೈ
ಬೆಳಗಾವಿ , ಬುಧವಾರ, 16 ಅಕ್ಟೋಬರ್ 2019 (08:45 IST)
ಬೆಳಗಾವಿ : ನೆರೆ ಸಂತ್ರಸ್ತರ ನೆರವಿಗೆ ನಿಂತ ಸಿಎಂ ಬಿಎಸ್ ಯಡಿಯೂರಪ್ಪ ಅವರು ರೈತ ಸಮುದಾಯಕ್ಕೆ ಕಹಿ ಸುದ್ದಿಯೊಂದನ್ನು ನೀಡಿದ್ದಾರೆ.




ಇವತ್ತಿನ ಹಣಕಾಸಿನ ಪರಿಸ್ಥಿತಿ, ನೆರೆ ಪ್ರವಾಹದಂತ ದೊಡ್ಡ ಅನಾಹುತ ಆಗಿದೆ. ಹೀಗಾಗಿ ಎಲ್ಲಾ  ಕಾರ್ಯಕ್ರಮ ರದ್ದು ಮಾಡಿ ನೆರೆ ಪರಿಹಾರಕ್ಕೆ ಬದಲಾವಣೆ ಮಾಡುವ ಪರಿಸ್ಥಿತಿ ಬಂದಿದೆ. ಆದಕಾರಣ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳುವುದರ ಮೂಲಕ ಸಿಎಂ ರೈತರಿಗೆ ಬಿಗ್ ಶಾಕ್ ನೀಡಿದ್ದಾರೆ.


ನಾವು ಪ್ರಮಾಣ ಮಾಡಿದಂತೆ ಬೆಳೆಗೆ ಹೆಚ್ಚು ಪರಿಹಾರ ಮತ್ತು ಮನೆ ಕಟ್ಟಿಕೊಳ್ಳಲು ಹೆಚ್ಚು ಪರಿಹಾರ ನೀಡುತ್ತಿದ್ದೇವೆ. ನಮ್ಮ ದೇಶದ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ  ಪರಿಹಾರ ಕೊಟ್ಟ ಉದಾಹರಣೆ ಇಲ್ಲ. ಆದ್ದರಿಂದ ಬೇರೆ ಯಾವುದನ್ನೂ ಮಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ ಮಹಿಳೆ