Publish Date: Sun, 18 Aug 2019 (11:01 IST)
Updated Date: Sun, 18 Aug 2019 (11:02 IST)
ಬೆಂಗಳೂರು : ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಿಎಸ್ ಯಡಿಯೂರಪ್ಪ ಅವರು ವಿರೋಧ ಪಕ್ಷಗಳ ಟೀಕೆಗಳ ನಡುವೆ ರಾಜ್ಯ ಸಂಪುಟ ರಚನೆ ಕಸರತ್ತು ಪೂರ್ಣಗೊಳಿಸಿದ್ದಾರೆ.
ದೆಹಲಿಯಲ್ಲಿ ಅಮಿತ್ ಶಾ ಅವರ ಜೊತೆ ಚರ್ಚಿಸಿ ಮತ್ತೆ ಬೆಂಗಳೂರಿಗೆ ವಾಪಾಸಾದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಾಧ್ಯಮದ ಜೊತೆ ಮಾತನಾಡಿ, ಸಚಿವ ಸಂಪುಟ ಪ್ರಕ್ರಿಯೆ ಪೂರ್ಣಗೊಂಡಿರುವುದಾಗಿ ತಿಳಿಸಿದ್ದಾರೆ.
'ಸೋಮವಾರ ಮಧ್ಯಾಹ್ನ ಕ್ಯಾಬಿನೆಟ್ನಲ್ಲಿ ಯಾರೆಲ್ಲಾ ಇರಲಿದ್ದಾರೆ ಎಂಬುದು ಫೈನಲ್ ಆಗಲಿದೆ. ಮಂಗಳವಾರ 3-4 ಗಂಟೆ ಹೊತ್ತಿಗೆ ಸಂಪುಟ ರಚನೆ ಆಗಲಿದೆ. ಮೊದಲ ಹಂತದಲ್ಲಿ 13-14 ಸಚಿವರು ಸಂಪುಟ ಸೇರಿಕೊಳ್ಳಲಿದ್ದಾರ ಎಂದು ಅವರು ಹೇಳಿದ್ದಾರೆ.