Select Your Language

Notifications

webdunia
webdunia
webdunia
webdunia

ಮತ್ತೆ 2 ನೇ ಬಾರಿ ಸಚಿವ ಸಂಪುಟ ವಿಸ್ತರಣೆಗೆ ಮುಂದಾದ ಸಿಎಂ ಯಡಿಯೂರಪ್ಪ

ಮತ್ತೆ 2 ನೇ ಬಾರಿ ಸಚಿವ ಸಂಪುಟ ವಿಸ್ತರಣೆಗೆ ಮುಂದಾದ ಸಿಎಂ ಯಡಿಯೂರಪ್ಪ
ಬೆಂಗಳೂರು , ಸೋಮವಾರ, 26 ಆಗಸ್ಟ್ 2019 (10:34 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ಅವರ  ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಮತ್ತೆ 2 ನೇ ಬಾರಿ ಸಚಿವ ಸಂಪುಟ ವಿಸ್ತರಣೆಯಾಗಿದೆ ಎಂಬ ಮಾಹಿತಿ  ತಿಳಿದುಬಂದಿದೆ.




ಬಿಜೆಪಿ ಸರ್ಕಾರದ ಮೊದಲನೇ ಹಂತದ ಸಚಿವ ಸಂಪುಟ ಈಗಾಗಲೇ ವಿಸ್ತರಣೆಯಾಗಿದ್ದು, 17 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೆಲವು ಶಾಸಕರು ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಹಿನ್ನಲೆಯಲ್ಲಿ ಶಾಸಕರ ಅಸಮಾಧಾನ ತಣ್ಣಗಾಗಿಸಲು ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.


ಆರ್.ಎಸ್.ಎಸ್. ಸೂಚನೆ ಮೇರೆಗೆ ನಾಳೆ 2ನೇ ಹಂತದ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, ಅಸಮಾಧಾನಿತ ಶಾಸಕರಾದ ಉಮೇಶ್ ಕತ್ತಿ, ಅರವಿಂದ್ ಲಿಂಬಾವಳಿ ಇಬ್ಬರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಿಎಂ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಖಾತೆ ಹಂಚಿಕೆಯಲ್ಲಿ ಭಾರೀ ಲೆಕ್ಕಚಾರ ಹಾಕುತ್ತಿರುವ ಸಿಎಂ