Webdunia - Bharat's app for daily news and videos

Install App

ಸಮತೂಕದ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ

Webdunia
ಸೋಮವಾರ, 8 ಮಾರ್ಚ್ 2021 (09:25 IST)
ಬೆಂಗಳೂರು: ಕೊರೋನಾ ಸಂಕಷ್ಟ ಕಾಲದ ಬಳಿಕ ರಾಜ್ಯ ಬಜೆಟ್ ಮಂಡನೆಗೆ ಸಿಎಂ ಯಡಿಯೂರಪ್ಪ ಸಿದ್ಧತೆ ನಡೆಸಿದ್ದಾರೆ. ಇಂದು ಸಮತೋಲಿತ ಬಜೆಟ್ ಮಂಡನೆಯ ಸಾಧ್ಯತೆ ಹೆಚ್ಚಿದೆ.


ಕೊರೋನಾ, ಪ್ರವಾಹ, ಬರ ಇತ್ಯಾದಿಗಳಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವಾಗ ಬಜೆಟ್ ಮಂಡಿಸುವುದು ಸಿಎಂಗೆ ಸವಾಲಿನ ಕೆಲಸವಾಗಲಿದೆ. ಈ ಬಜೆಟ್ ನಲ್ಲಿ ಆರೋಗ್ಯ, ಕೃಷಿ ಕ್ಷೇತ್ರ, ಪ್ರತೀ ತಾಲೂಕಿನಲ್ಲಿ ಗೋ ಶಾಲೆಗಳ ಸ್ಥಾಪನೆ, ಸಣ್ಣ ನೀರಾವರಿ ಯೋಜನೆಗಳಿಗೆ ಒತ್ತು ನೀಡುವುದು ಸೇರಿದಂತೆ ಸಂಕಷ್ಟಕ್ಕೀಡಾಗಿರುವ ಉದ್ಯಮಗಳನ್ನು ಮೇಲೆತ್ತಲು ಯೋಜನೆ ಪ್ರಕಟಿಸುವ ಸಾಧ‍್ಯತೆಯಿದೆ.

ಈಗಾಗಲೇ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವುದರಿಂದ ಬಾಹ್ಯ ಮೂಲಗಳಿಂದ ಸಾಲ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೊರೋನಾದಿಂದಾಗಿ ಸಂಪನ್ಮೂಲ ಕ್ರೋಡೀಕರಣ ರಾಜ್ಯ ಸರ್ಕಾರಕ್ಕೆ ಸವಾಲಾಗಿದೆ. ಹೊಸ ಯೋಜನೆಗಳಿಗಿಂತ ಹಳೇ ಯೋಜನೆಗಳನ್ನು ಮುಂದುವರಿಸಲು ಸರ್ಕಾರ ಹೆಚ್ಚಿನ ಒತ್ತು ನೀಡಬಹುದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments