Webdunia - Bharat's app for daily news and videos

Install App

ಪಶ್ವಿಮ ಬಂಗಾಲದಲ್ಲಿ ವಕ್ಫ್ ಗಲಾಟೆ: ಹಿಂದೂಗಳನ್ನು ಮನೆಯಿಂದ ಹೊರಗೆಳೆದು ಹತ್ಯೆ

Krishnaveni K
ಭಾನುವಾರ, 13 ಏಪ್ರಿಲ್ 2025 (18:17 IST)
ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ವಕ್ಫ್ ತಿದ್ದುಪಡಿ ಬಿಲ್ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ತಾಳಿದೆ. ಈ ನಡುವೆ ಹಿಂದೂಗಳನ್ನು ಮನೆಯಿಂಧ ಹೊರಗೆಳೆದು ಹತ್ಯೆ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.

ವಕ್ಫ್ ಕಾಯಿದೆ ವಿಚಾರದಲ್ಲಿ  ವಿರೋಧ ಪಕ್ಷಗಳು ಮುಸ್ಲಿಮರ ದಾರಿ ತಪ್ಪಿಸುತ್ತಿದೆ. ವಕ್ಫ್ ಕಾನೂನು ಪ್ರತಿಭಟನೆ ಹೆಸರಿನಲ್ಲಿ ಹಿಂಸಾಚಾರ ನಡೆಸಲಾಗುತ್ತಿದೆ ಎಂದು ಅವರು ಮುರ್ಷಿದಾಬಾದ್ ನಲ್ಲಿ ನಡೆದ ಹಿಂಸಾಚಾರವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

ವಕ್ಫ್ ಹೆಸರಿನಲ್ಲಿ ಪಶ್ಚಿಮ ಬಂಗಾಲದಲ್ಲಿ ಸಾವಿರಾರು ಎಕರೆ ದಲಿತರ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಮುರ್ಷಿದಾಬಾದ್ ನಲ್ಲಿ ಹಿಂದೂಗಳನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಇವರೆಲ್ಲಾ ಯಾರು? ಈ ಭೂಮಿಯಿಂದ ಹೆಚ್ಚು ಲಾಭ ಪಡೆಯುವವರು ದಲಿತರು, ಬಡ ಹಿಂದೂಗಳು ಎಂದು ಅವರಿಗೆ ಗೊತ್ತಿದೆ. ಬಡವರು ಬಹುಮಹಡಿ ಕಟ್ಟಡಗಳನ್ನು ಕಟ್ಟಿದರೆ ಅವರ ಮತಬ್ಯಾಂಕ್ ಗೆ ಧಕ್ಕೆಯಾಗುತ್ತದೆ. ಇದೇ ಕಾರಣಕ್ಕೆ ಹಿಂಸಾಚಾರಕ್ಕೆ ಪ್ರಚೋದನೆ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಕೂಡಾ ಇದೇ ಆರೋಪ ಮಾಡಿದ್ದಾರೆ. ಧುಲಿಯಾನ, ಮುರ್ಷಿದಾಬಾದ್ ನಲ್ಲಿ ಸುಮಾರು 400 ಕ್ಕೂ ಹೆಚ್ಚು ಹಿಂದೂಗಳನ್ನು ಮನೆ ಬಿಟ್ಟು ಓಡಿಸಲಾಗಿದೆ. ಪ್ರಾಣ ಭೀತಿಯಿಂದ ಹಿಂದೂಗಳು ಇಲ್ಲಿಂದ ಓಡಿ ಹೋಗಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments