ಸಮ್ಮಿಶ್ರ ಸರಕಾರ: ಕರುಣಾಕರ ರೆಡ್ಡಿ ಹೇಳಿದ ಭವಿಷ್ಯ ಗೊತ್ತಾ?

Webdunia
ಶುಕ್ರವಾರ, 29 ಜೂನ್ 2018 (16:07 IST)
ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದ ದಿನದಂದು ಗೊಂದಲವಂತೂ ಇದ್ದೇ ಇದೆ. ಈ ಸಮ್ಮಿಶ್ರ ಸರಕಾರ ಪೂರ್ಣಾವಧಿ ಆಡಳಿತ ನಡೆಸುತ್ತದೆ ಎನ್ನುವುದು ಜನರಿಗೆ ನಂಬಿಕೆ ಇಲ್ಲ. ಹೀಗಂತ ಮಾಜಿ ಸಚಿವ ಕರುಣಾಕರ ರೆಡ್ಡಿ ಹೇಳಿಕೆ ನೀಡಿದ್ದಾರೆ. 
 
ದಾವಣಗೆರೆ ಜಿಲ್ಲೆಯ ಹರಪನಹಳ್ಳಿಯಲ್ಲಿ ಮಾತನಾಡಿದ ಅವರು, ಯಾವ ವೇಳೆಯಲ್ಲಿಯಾದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಹುದು. ಬಿಜೆಪಿಗೂ ಹೈಕಮಾಂಡ್ ಇದೆ. ನಮ್ಮವರು ಒಳ್ಳೆಯದು ಹಾಗೂ ಕೆಟ್ಟದ್ದನ್ನು ನೋಡಿ ಯೋಚನೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. 
 
ಆಪರೇಷನ್ ಕಮಲದ ಪ್ರಶ್ನೆ ಬರುವುದಿಲ್ಲ ಎಂದಿರುವ ಅವರು, ಬಜೆಟ್ ಮಂಡನೆ ಮಾಡುವ ಅವಶ್ಯಕತೆ ಇಲ್ಲವೇ ಇಲ್ಲ ಎಂದು ಕಾಂಗ್ರೆಸ್ ನವರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಜೆಡಿಎಸ್ ಪಟ್ಟು ಹಿಡಿದಿದೆ. ಹೀಗಾಗಿ ಈ ಸರಕಾರ ಎಲ್ಲಿಯವರೆಗೆ ನಡೆಯುತ್ತದೆ ಎಂದು ಕಾದು ನೋಡಬೇಕೆಂದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

ಮುಂದಿನ ಸುದ್ದಿ
Show comments