Select Your Language

Notifications

webdunia
webdunia
webdunia
webdunia

ಬೋಟ್ ಖರೀದಿಗೆ ನಿರುತ್ಸಾಹ ತೋರಿದ ಕರಾವಳಿ ಮೀನುಗಾರರು?

ಬೋಟ್ ಖರೀದಿಗೆ ನಿರುತ್ಸಾಹ ತೋರಿದ ಕರಾವಳಿ ಮೀನುಗಾರರು?
ಕಾರವಾರ , ಮಂಗಳವಾರ, 7 ಫೆಬ್ರವರಿ 2023 (10:48 IST)
ಕಾರವಾರ : ಮತ್ಸ್ಯ ಸಂಪದ ಯೋಜನೆಗೆ ಕೇಂದ್ರ ಬಜೆಟ್ನಲ್ಲಿ ಸಾವಿರಾರು ಕೋಟಿ ಅನುದಾನ ಘೋಷಿಸಿದೆ. ಇದೇ ಯೋಜನೆಯ ಅನುದಾನ ಬಳಸಿ ರಾಜ್ಯ ಸರ್ಕಾರ ಆಳಸಮುದ್ರ ದೋಣಿ ಖರೀದಿಗೆ ರೂಪಿಸಿದ್ದ ಯೋಜನೆ ಜಿಲ್ಲೆಯಲ್ಲಿ ಸಮರ್ಪಕ ಅನುಷ್ಠಾನಕ್ಕೆ ಬಂದಿಲ್ಲ.

ಸರ್ಕಾರ ಸೂಚಿಸಿದ ದೋಣಿಗಳ ಖರೀದಿಗೆ ಇಲ್ಲಿನ ಮೀನುಗಾರರು ಒಪ್ಪದಿರುವುದು ಯೋಜನೆಯ ಹಿನ್ನೆಲೆಗೆ ಕಾರಣವಾಗಿದೆ. ಮೀನುಗಾರರ ಬೇಡಿಕೆಗೆ ತಕ್ಕ ದೋಣಿ ಖರೀದಿಗೆ ಸಹಾಯಧನ ಒದಗಿಸಲು ಸರ್ಕಾರ ಒಪ್ಪದ ಕಾರಣ ಯೋಜನೆ ಘೋಷಣೆಗೆ ಸೀಮಿತವಾಗಿಯೇ ಉಳಿದುಕೊಂಡಿದೆ.

ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆ ಸಹಯೋಗದೊಂದಿಗೆ ಕಳೆದ ರಾಜ್ಯ ಬಜೆಟ್ನಲ್ಲಿ ಸರ್ಕಾರ 100 ಆಳಸಮುದ್ರ ಮೀನುಗಾರಿಕೆ ದೋಣಿಗಳ ಖರೀದಿಗೆ ಸಹಾಯಧನ ನೀಡುವುದಾಗಿ ಘೋಷಣೆ ಮಾಡಿತ್ತು. ಈ ಪೈಕಿ 50 ದೋಣಿಗಳನ್ನು ಉತ್ತರ ಕನ್ನಡಕ್ಕೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.  

Share this Story:

Follow Webdunia kannada

ಮುಂದಿನ ಸುದ್ದಿ

ಸುಮಲತಾ ಶ್ರೀರಂಗಪಟ್ಟಣದಿಂದ ಸ್ಫರ್ಧೆಗೆ ಆಹ್ವಾನ