Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ತೆಂಗಿನಕಾಯಿ ಬೆಲೆ ಭಾರೀ ಏರಿಕೆ, ಕಾಯಿಯೂ ಬರ್ತಿಲ್ಲ

Krishnaveni K
ಶನಿವಾರ, 8 ಮಾರ್ಚ್ 2025 (10:21 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಈಗ ತೆಂಗಿನ ಕಾಯಿ ಭಾರೀ ದುಬಾರಿಯಾಗಿದೆ. ಮಾರುಕಟ್ಟೆಗೂ ತೆಂಗಿನಕಾಯಿ ಬರೋದೇ ಕಡಿಮೆಯಾಗಿದೆ. ಇದೀಗ ತೆಂಗಿನಕಾಯಿ ದರ ಎಷ್ಟಿದೆ ಇಲ್ಲಿದೆ ವಿವರ.

ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನ ಬಹುತೇಕ ಕಡೆ ತೆಂಗಿನಕಾಯಿ ಬೆಲೆಯಲ್ಲಿ ವ್ಯಾಪಕವಾಗಿ ಏರಿಕೆಯಾಗುತ್ತಲೇ ಇದೆ. ಉತ್ತಮ ಗುಣಮಟ್ಟದ ಕಾಯಿಯೂ ಬರುತ್ತಿಲ್ಲ. ಇದೇ ಕಾರಣಕ್ಕೆ ಬೆಲೆಯಲ್ಲೂ ಏರಿಕೆಯಾಗುತ್ತಿದೆ ಎನ್ನುವುದು ವ್ಯಾಪಾರಿಗಳ ಅಭಿಪ್ರಾಯ.

ಕಳೆದ ತಿಂಗಳು ಸಾಮಾನ್ಯ ಗಾತ್ರದ ತೆಂಗಿನಕಾಯಿಗೆ 40 ರೂ.ಗೆ ಏರಿಕೆಯಾಗಿತ್ತು. ಆದರೆ ಈ ತಿಂಗಳು ಇದೇ ಕಾಯಿಯ ಬೆಲೆ 50 ರೂ.ಗೆ ಏರಿಕೆಯಾಗಿದೆ. ದೊಡ್ಡ ಗಾತ್ರದ ತೆಂಗಿನಕಾಯಿ ಬೆಲೆಯಂತೂ 60-70 ರೂ.ಗಳಷ್ಟಿದೆ. ಬೆಲೆ ಏರಿಕೆಯಿಂದಾಗಿ ಜನ ಕೊಳ್ಳುವುದೂ ಕಡಿಮೆಯಾಗಿದೆ.

ಮೊದಲೆಲ್ಲಾ ಸಣ್ಣ ಪುಟ್ಟ ಕೈ ಗಾಡಿಗಳಲ್ಲೂ ತೆಂಗಿನಕಾಯಿ ಇತ್ತು. ಆದರೆ ಈಗ ಬೆಲೆ ಹೆಚ್ಚಳವಾದ ಬೆನ್ನಲ್ಲೇ ಕೊಳ್ಳುವವರ ಸಂಖ್ಯೆಯೂ ಕಡಿಮೆಯಾಗಿದೆ. ಹೀಗಾಗಿ ಸಣ್ಣ ಪುಟ್ಟ ಅಂಗಡಿಗಳಲ್ಲಿ ತೆಂಗಿನಕಾಯಿಯೇ ಸಿಗುತ್ತಿಲ್ಲ. ಬೇಸಿಗೆಯಲ್ಲಿ ತೆಂಗಿನಕಾಯಿಯನ್ನು ಹಾಳಾಗದಂತೆ ಇಡುವುದೂ ದೊಡ್ಡ ತಲೆನೋವು. ಬೆಲೆಯೂ ದುಬಾರಿಯಾಗಿರುವುದರಿಂದ ಜನ ಕೊಳ್ಳುವುದಿಲ್ಲ. ಹೀಗಾಗಿ ತಂದರೂ ನಮಗೆ ವೇಸ್ಟ್ ಆಗುತ್ತಿದೆ ಎಂದು ವ್ಯಾಪಾರಿಯೊಬ್ಬರು ಹೇಳುತ್ತಾರೆ.

ಮಾರುಕಟ್ಟೆಯಲ್ಲಿ ಈಗ ಬೀನ್ಸ್, ಟೊಮೆಟೊ ಸೇರಿದಂತೆ ಇತರೆ ತರಕಾರಿಗಳ ಬೆಲೆಯಲ್ಲಿ ಕೊಂಚ ಮಟ್ಟಿಗೆ ಇಳಿಕೆಯಾಗಿದೆ. ಆದರೆ ತೆಂಗಿನಕಾಯಿ ಬೆಲೆ ವಿಪರೀತ ಎನಿಸುವಷ್ಟು ಏರಿಕೆಯಾಗಿದೆ. ಅದೇ ರೀತಿ ಎಳೆನೀರಿನ ಪರಿಸ್ಥಿತಿಯೂ ಆಗಿದೆ. ಲೋಡ್ ಬರುವುದು ಅಪರೂಪವಾಗಿದೆ. ಹೀಗಾಗಿ ಎಳೆನೀರಿನ ಬೆಲೆ 65 ರೂ.ಗಳಿಂದ 70 ರೂ.ವರೆಗೆ ಬಂದು ತಲುಪಿದೆ. ಬೇಸಿಗೆ ಮುಗಿಯುವರೆಗೂ ಬಹುಶಃ ಇದೇ ಪರಿಸ್ಥಿತಿ ಮುಂದುವರಿಯಬಹುದು ಎಂದು ವ್ಯಾಪಾರಿಗಳು ಅಭಿಪ್ರಾಯಪಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ಮುಂದಿನ ಸುದ್ದಿ
Show comments