ಕಾಫಿ, ಶುಂಠಿ ಬೆಳೆಗಾರ ಕಾಡಾನೆಗಳ ದಾಳಿಗೆ ಕಂಗಾಲು

Webdunia
ಗುರುವಾರ, 19 ಜುಲೈ 2018 (14:19 IST)
ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆಗಳ ಹಾವಳಿಗೆ ಶುಂಠಿ ಬೆಳೆಗಾರ ಇನ್ನಿಲ್ಲದಂತೆ ಹೈರಾಣಾಗುತ್ತಿದ್ದಾನೆ. ಕಾಡಾನೆ ಹಾವಳಿ ತಡೆಗೆ ಒತ್ತಾಯಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುವ ಕಾಡಾನೆಗಳು ಹಾವಳಿ ನಡೆಸುತ್ತ ಬೆಳೆಗಾರರ ಆರ್ಥಿಕ ಸಂಕಷ್ಟಕ್ಕೆ ಕಾರಣರಾಗುತ್ತಿದ್ದಾರೆ. 
 

ರೈತರ ಕೃಷಿ ಫಸಲು ನಾಶವಾಗುತ್ತಿದೆ. ಶುಂಠಿ ಕೃಷಿ ಬೆಳೆಗೆ ಕಾಡಾನೆ ದಾಳಿಯಿಂದ ಕಂಗಾಲಾದ ರೈತರು ಪಾಲಿಬೆಟ್ಟ ಮೇಕೂರು ಭಾಗದಲ್ಲಿ ಕಾಡಾನೆ ಹಾವಳಿ ತಡೆಗೆ ಒತ್ತಾಯ ಮಾಡಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಮೇಕೂರು ಭಾಗದಲ್ಲಿ ಹದಿನಾರಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಳೆದ ಹದಿನೈದು ದಿನಗಳಿಂದ ಕಾಣಿಸಿಕೊಂಡಿವೆ. ಆ ಭಾಗದಲ್ಲಿ ಶುಂಠಿ ಸೇರಿದಂತೆ ಕಾಫಿ ಬೆಳೆಗಳನ್ನು ತುಳಿದು ನಾಶ ಮಾಡುವ ಮೂಲಕ ಕಾರ್ಮಿಕರು, ರೈತರಲ್ಲಿ ಆತಂಕ ಮೂಡಿಸಿವೆ.

ಕಾಫಿ ತೋಟ, ಶುಂಠಿ ಬೆಳೆಗಳ ಮೇಲೆ ನಿರಂತರ ದಾಳಿ ಮಾಡುತ್ತಿರುವ ಕಾಡಾನೆಗಳ ಹಿಂಡುನಿಂದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗುತ್ತಿದೆ. ಕಾಡಾನೆ ಹಾವಳಿಯಿಂದ ಕಾರ್ಮಿಕರು ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಡುಹಗಲೇ ಕಾಣಿಸಿಕೊಳ್ಳುತ್ತಿರುವ ಕಾಡಾನೆ ಹಾವಳಿಯಿಂದ ಶಾಲಾ ವಿದ್ಯಾರ್ಥಿಗಳು,  ಕಾರ್ಮಿಕರು, ಬೆಳೆಗಾರರು ಭಯಭೀತರಾಗಿದ್ದಾರೆ. ಶುಂಠಿ ಕೃಷಿ ಮಾಡಿದ ಬೆಳೆಗೆ ಕಾಡಾನೆಗಳ ಹಿಂಡು ದಾಳಿ ಮಾಡಿ ಅಪಾರ ಪ್ರಮಾಣದ ಶುಂಠಿ ಬೆಳೆಯನ್ನು ನಾಶ ಮಾಡಿದೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಶುಂಠಿ ಬೆಳೆಗಾರ ಸೈನುಲ್ಲಾ ಅಳಲು ತೋಡಿಕೊಂಡಿದ್ದಾರೆ.  

ನಿರಂತರ ಕಾಡಾನೆ ಹಾವಳಿಯಿಂದ ಕೆಲಸ ಮಾಡಲು ಸಾಧ್ಯವಾಗದೇ ಕಂಗಾಲಾಗಿದ್ದೇವೆ. ಈ ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆ ಹಿಂಡುಗಳನ್ನು ಶಾಶ್ವತವಾಗಿ ಕಾಡಿಗೆ ಅಟ್ಟಬೇಕೆಂದು ಕಾರ್ಮಿಕರು ಒತ್ತಾಯಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಬಹುಶಃ ಕಮಲ್ ಹಾಸನ್ ಸಿಎಂ ಆಗಿದ್ದರೆ ಅಸೂಯೆ ಪಡುತ್ತಿದ್ದೆ: ವಿಜಯ್ ಬಗ್ಗೆ ಅಸೂಯೆಗೆ ಸ್ಪಷ್ಟನೆ ಕೊಟ್ಟ ನಟ ರಜನಿಕಾಂತ್‌

ಬೆಲೆ ಏರಿಕೆಗೆ ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೀವೆಷ್ಟು ದರ ಏರಿಸಿದ್ದೀರಿ ಪಟ್ಟಿ ನೀಡಿ: ಕುಮಾರಸ್ವಾಮಿ ಸವಾಲು

ಮುಂದಿನ ಸುದ್ದಿ
Show comments