Webdunia - Bharat's app for daily news and videos

Install App

ಕಾಫಿ ನಾಡು ತತ್ತರ; ಮಳೆ ನಿಲ್ಲಿಸುವಂತೆ ಶ್ರೀಗಳಿಗೆ ಅರಿಕೆ ಮಾಡಿಕೊಂಡ ರೈತರು

Webdunia
ಭಾನುವಾರ, 12 ಆಗಸ್ಟ್ 2018 (16:33 IST)
ಕಾಫಿನಾಡು, ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಮೂರು ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮಲೆನಾಡಿಗರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಚಿಕ್ಕಮಗಳೂರಿನ ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಕುದುರೆಮುಖ, ಕಳಸ, ಬಾಳೆಹೊನ್ನೂರು ಹಾಗೂ ತರೀಕೆರೆಯಲ್ಲಿ ರಾತ್ರಿಯಿಂದ ಧಾರಾಕಾರ ಮಳೆಯಾಗ್ತಿದೆ. ಮಲೆನಾಡಲ್ಲಿ ರಾತ್ರಿ ವೇಳೆಯಲ್ಲೇ ಹೆಚ್ಚು ಮಳೆಯಾಗ್ತಿದ್ದು, ಹಗಲಲ್ಲಿ ಬಿಟ್ಟು-ಬಿಟ್ಟು ಮಳೆ ಸುರಿಯುತ್ತಿದೆ. ಭದ್ರಾ, ತುಂಗಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಚಿಕ್ಕಮಗಳೂರು- ಹೊರನಾಡು- ಕಳಸ ರಸ್ತೆ ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆ ಭೀತಿ ಎದುರುಸುತ್ತಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಲೆನಾಡಿನ ನೂರಾರು ಹಳ್ಳಿಗಳು ವಿದ್ಯುತ್ ಸಂಪರ್ಕ ಕೂಡ ಕಳೆದುಕೊಂಡು ಪರಿತಪಿಸುವಂತಾಗಿದೆ.

ಇನ್ನು ಮಳೆಯ ಅವಾಂತರದಿಂದ ರೋಸಿ ಹೋಗಿರುವ ಶೃಂಗೇರಿ ಭಾಗದ ರೈತರು ಮಳೆ ಆರ್ಭಟ ನಿಲ್ಲಿಸುವಂತ್ತೆ ಶೃಂಗೇರಿ ಪೀಠದ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಸ್ವಾಮೀಜಿಯ ಬಳಿ ಹರಕೆ ಕಟ್ಟಿಕೊಂಡಿದ್ದಾರೆ. ಶೃಂಗೇರಿಯ ನರಸಿಂಹ ವನದಲ್ಲಿರುವ  ಜಗದ್ಗುರುಗಳ ನಿವಾಸಕ್ಕೆ ತೆರಳಿ ನೂರಾರು ರೈತರು ಹರಕೆ ಮಾಡಿಕೊಂಡಿದ್ದು ಜಗದ್ಗುರುಗಳು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಇನ್ನು ಜಗದ್ಗುರುಗಳಿಗೆ ಅರಿಕೆ ಮಾಡಿಕೊಂಡ್ರೆ ಮಳೆ ಕಡಿಮೆಯಾಗುವ ಪ್ರತೀತಿ ಇರೋದ್ರಿಂದ ರೈತರಿಂದ ಅರಿಕೆ ಮಾಡಿಕೊಳ್ಳಲಾಗಿದೆ, ಕಳೆದ ಜೂನ್ ನಲ್ಲೂ ಶೃಂಗೇರಿ ದೇವಸ್ಥಾನದ ಪಕ್ಕದಲ್ಲಿ ಹರಿಯುತ್ತಿರುವ ತುಂಗಾ ನದಿ ತಟದಲ್ಲಿ ಜಗದ್ಗುರುಗಳು ಗಂಗೆ ಪೂಜೆ ಮಾಡುವ ಮೂಲಕ ಮಳೆ ಆರ್ಭಟ ನಿಲ್ಲಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments