ಮೋದಿ ಕಾರ್ಯಕ್ರಮದಿಂದ ಶೆಟ್ಟರ್​ಗೆ ಕೊಕ್​!

Webdunia
ಬುಧವಾರ, 11 ಜನವರಿ 2023 (20:24 IST)
ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಅವರನ್ನು BJP ಕಡೆಗಣನೆ ಮಾಡಲಾಗುತ್ತಿದೆ ಎಂಬ ಅನುಮಾನಗಳಿಗೆ ಪೂರಕ ಎಂಬಂತೆ ಅವರ ಹೆಸರನ್ನು ಪ್ರಧಾನಿಗಳ ಕಾರ್ಯಕ್ರಮದಿಂದ ಕೈ ಬಿಡಲಾಗಿದೆ. ರಾಷ್ಟ್ರೀಯ ಯುವಜನೋತ್ಸವ  ಕಾರ್ಯಕ್ರಮಕ್ಕೆ ನಾಳೆ ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಆದರೆ ಈ ಕಾರ್ಯಕ್ರಮದ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಹೆಸರನ್ನು ಕೈ ಬಿಡಲಾಗಿದೆ. ದಸರಾ ಸಮಯದಲ್ಲಿ ಹುಬ್ಬಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದ ವೇಳೆಯೂ ಇದೇ ರೀತಿ ನಡೆದಿತ್ತು. ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದಲ್ಲಿಯೂ ಶೆಟ್ಟರ್ ಹೆಸರನ್ನು ಕೈಬಿಡಲಾಗಿತ್ತು. ಈ ಬಗ್ಗೆ ಶೆಟ್ಟರ್ ಅಸಮಾಧಾನ ಹೊರ ಹಾಕಿದಾಗ ವೇದಿಕೆಯಲ್ಲಿ ಸ್ಥಾನ ಮೀಸಲಿರಿಸಲಾಗಿತ್ತು. ಇದೀಗ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಜಗದೀಶ್ ಶೆಟ್ಟರ್​ ಅವರಿಗೆ ಕೊಕ್ ಕೊಡಲಾಗಿದೆ. ಜಗದೀಶ್ ಶೆಟ್ಟರ್​ ಕ್ಷೇತ್ರದಲ್ಲಿಯೇ ಕಾರ್ಯಕ್ರಮ ನಡೆಯುತ್ತಿದ್ದರೂ ಸ್ಥಳೀಯ ಶಾಸಕರ ಹೆಸರನ್ನು ಆಹ್ವಾನ ಪತ್ರಿಕೆಯಿಂದ ಕೈ ಬಿಡಲಾಗಿದೆ. ಈ ಕಡೆಗಣನೆಗೆ ಶೆಟ್ಟರ್​ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ. ನಾಳೆ ಹುಬ್ಬಳ್ಳಿಯ ಕುಸಗಲ್ ರೈಲ್ವೇ ಮೈದಾನದಲ್ಲಿ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಚರ್ಚೆ ಮತ್ತೆ ಶುರುವಾಗಿರುವುದಕ್ಕೆ ಕಾರಣ ಇಲ್ಲಿದೆ

Karnataka Weather: ಇಂದಿನ ರಾಜ್ಯದ ಹವಾಮಾನ ವರದಿ ಇಲ್ಲಿದೆ

ನಕ್ಸಲ್ ಮುಕ್ತ ಭಾರತದತ್ತ ಮತ್ತೊಂದು ಹೆಜ್ಜೆ, ಛತ್ತೀಸ್‌ಗಢದಲ್ಲಿ 51 ನಕ್ಸಲರು ಶರಣು

ಈ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳಿನ ರಾಜ: ಸಚಿವ ಸೋಮಣ್ಣ

ಮುಂದಿನ ಸುದ್ದಿ
Show comments