Webdunia - Bharat's app for daily news and videos

Install App

ಮೋದಿ ಕಾರ್ಯಕ್ರಮದಿಂದ ಶೆಟ್ಟರ್​ಗೆ ಕೊಕ್​!

Webdunia
ಬುಧವಾರ, 11 ಜನವರಿ 2023 (20:24 IST)
ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಅವರನ್ನು BJP ಕಡೆಗಣನೆ ಮಾಡಲಾಗುತ್ತಿದೆ ಎಂಬ ಅನುಮಾನಗಳಿಗೆ ಪೂರಕ ಎಂಬಂತೆ ಅವರ ಹೆಸರನ್ನು ಪ್ರಧಾನಿಗಳ ಕಾರ್ಯಕ್ರಮದಿಂದ ಕೈ ಬಿಡಲಾಗಿದೆ. ರಾಷ್ಟ್ರೀಯ ಯುವಜನೋತ್ಸವ  ಕಾರ್ಯಕ್ರಮಕ್ಕೆ ನಾಳೆ ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಆದರೆ ಈ ಕಾರ್ಯಕ್ರಮದ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಹೆಸರನ್ನು ಕೈ ಬಿಡಲಾಗಿದೆ. ದಸರಾ ಸಮಯದಲ್ಲಿ ಹುಬ್ಬಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದ ವೇಳೆಯೂ ಇದೇ ರೀತಿ ನಡೆದಿತ್ತು. ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದಲ್ಲಿಯೂ ಶೆಟ್ಟರ್ ಹೆಸರನ್ನು ಕೈಬಿಡಲಾಗಿತ್ತು. ಈ ಬಗ್ಗೆ ಶೆಟ್ಟರ್ ಅಸಮಾಧಾನ ಹೊರ ಹಾಕಿದಾಗ ವೇದಿಕೆಯಲ್ಲಿ ಸ್ಥಾನ ಮೀಸಲಿರಿಸಲಾಗಿತ್ತು. ಇದೀಗ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಜಗದೀಶ್ ಶೆಟ್ಟರ್​ ಅವರಿಗೆ ಕೊಕ್ ಕೊಡಲಾಗಿದೆ. ಜಗದೀಶ್ ಶೆಟ್ಟರ್​ ಕ್ಷೇತ್ರದಲ್ಲಿಯೇ ಕಾರ್ಯಕ್ರಮ ನಡೆಯುತ್ತಿದ್ದರೂ ಸ್ಥಳೀಯ ಶಾಸಕರ ಹೆಸರನ್ನು ಆಹ್ವಾನ ಪತ್ರಿಕೆಯಿಂದ ಕೈ ಬಿಡಲಾಗಿದೆ. ಈ ಕಡೆಗಣನೆಗೆ ಶೆಟ್ಟರ್​ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ. ನಾಳೆ ಹುಬ್ಬಳ್ಳಿಯ ಕುಸಗಲ್ ರೈಲ್ವೇ ಮೈದಾನದಲ್ಲಿ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments