ಮೋದಿ ಕಾರ್ಯಕ್ರಮದಿಂದ ಶೆಟ್ಟರ್​ಗೆ ಕೊಕ್​!

Webdunia
ಬುಧವಾರ, 11 ಜನವರಿ 2023 (20:24 IST)
ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಅವರನ್ನು BJP ಕಡೆಗಣನೆ ಮಾಡಲಾಗುತ್ತಿದೆ ಎಂಬ ಅನುಮಾನಗಳಿಗೆ ಪೂರಕ ಎಂಬಂತೆ ಅವರ ಹೆಸರನ್ನು ಪ್ರಧಾನಿಗಳ ಕಾರ್ಯಕ್ರಮದಿಂದ ಕೈ ಬಿಡಲಾಗಿದೆ. ರಾಷ್ಟ್ರೀಯ ಯುವಜನೋತ್ಸವ  ಕಾರ್ಯಕ್ರಮಕ್ಕೆ ನಾಳೆ ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಆದರೆ ಈ ಕಾರ್ಯಕ್ರಮದ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಹೆಸರನ್ನು ಕೈ ಬಿಡಲಾಗಿದೆ. ದಸರಾ ಸಮಯದಲ್ಲಿ ಹುಬ್ಬಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದ ವೇಳೆಯೂ ಇದೇ ರೀತಿ ನಡೆದಿತ್ತು. ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದಲ್ಲಿಯೂ ಶೆಟ್ಟರ್ ಹೆಸರನ್ನು ಕೈಬಿಡಲಾಗಿತ್ತು. ಈ ಬಗ್ಗೆ ಶೆಟ್ಟರ್ ಅಸಮಾಧಾನ ಹೊರ ಹಾಕಿದಾಗ ವೇದಿಕೆಯಲ್ಲಿ ಸ್ಥಾನ ಮೀಸಲಿರಿಸಲಾಗಿತ್ತು. ಇದೀಗ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಜಗದೀಶ್ ಶೆಟ್ಟರ್​ ಅವರಿಗೆ ಕೊಕ್ ಕೊಡಲಾಗಿದೆ. ಜಗದೀಶ್ ಶೆಟ್ಟರ್​ ಕ್ಷೇತ್ರದಲ್ಲಿಯೇ ಕಾರ್ಯಕ್ರಮ ನಡೆಯುತ್ತಿದ್ದರೂ ಸ್ಥಳೀಯ ಶಾಸಕರ ಹೆಸರನ್ನು ಆಹ್ವಾನ ಪತ್ರಿಕೆಯಿಂದ ಕೈ ಬಿಡಲಾಗಿದೆ. ಈ ಕಡೆಗಣನೆಗೆ ಶೆಟ್ಟರ್​ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ. ನಾಳೆ ಹುಬ್ಬಳ್ಳಿಯ ಕುಸಗಲ್ ರೈಲ್ವೇ ಮೈದಾನದಲ್ಲಿ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments