Webdunia - Bharat's app for daily news and videos

Install App

ಬಿಜಿಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್ಚಾಯ್ತು ಕೋಲ್ಡ್ ವಾರ್..!

Webdunia
ಮಂಗಳವಾರ, 27 ಜೂನ್ 2023 (20:00 IST)
ವಿಧಾನಸಭಾ ಚುನಾವಣೆಯಲ್ಲಿ ಸೋತುಸುಣ್ಣವಾಗಿರುವ ಬಿಜೆಪಿ ಪಕ್ಷ ಹೊಸ ಸಾರಥಿಯ ಹುಡುಕಾಟದಲ್ಲಿರುವ ಟೆನ್ಷನ್ ಒಂದು ಕಡೆ ಮತ್ತೊಂದು ಕಡೆ ಬಣಗಳ ವಾರ್ ಶುರುವಾಗಿದೆ ಎಂದು ಹೇಳಲಾಗ್ತಿದೆ. ಇಷ್ಟುದಿನ ರಾಜ್ಯಾಧ್ಯಕ್ಷ ರೇಸ್ ನಲ್ಲಿ ಅಶ್ವಥ್ ನಾರಾಯಣ್, ಸಿಟಿ ರವಿ, ಶೋಭಾ ಕರಂದ್ಲಾಜೆ,ಸುನೀಲ್ ಕುಮಾರ್ ಅನ್ನೋ ಹೆಸರುಗಳು ಕೇಳಿಬರ್ತಿದ್ದೋ. ಇದೀಗ ಈ ರೇಸ್ ಗೆ ವೀರಶೈವ‌ ಲಿಂಗಾಯತ ಸಮುದಾಯದ ಪ್ರಬಲ ನಾಯಕ ಮಾಜಿ ಸಚಿವ ವಿ.ಸೋಮಣ್ಣ ಬಂದಿದ್ದು ಕೇಸರಿ ಪಡೆಯಲ್ಲಿ ರಾಜ್ಯಾದ್ಯಕ್ಷರ  ಸ್ಥಾನದ ವಾರ್ ನಿಧಾನವಾಗಿ ಶುರುವಾಗ್ತಿದೆ. ಶಿಸ್ತಿನ ಪಕ್ಷ ಎಂಬ ಹೆಗ್ಗಳಿಕೆ ಹೊಂದಿದ್ದ ಬಿಜೆಪಿ ಯಲ್ಲಿ ಇದೀಗ ಒಳಬೇಗುದಿ ತಾರಕಕ್ಕೇರಿದ್ದು, ಪಕ್ಷದ  ಮುಖಂಡರು ಬಹಿರಂಗವಾಗಿಯೇ ಆರೋಪ-  ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.

ಸದ್ಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಈಗಾಗಲೇ ಪೂರ್ಣ ಗೊಂಡಿದ್ದು, ಹೊಸಬರ ನೇಮಕ ನಡೆಯಬೇಕಿತ್ತು. ಇದೇ ವೇಳೆ ವಿಧಾನಸಭೆಯಲ್ಲಿ ಆಡಳಿತಾ ರೂಢ ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಎದುರಿಸಲು ಶಾಸಕಾಂಗ ಪಕ್ಷದ ನಾಯಕನ  ಆಯ್ಕೆಯೂ ಮುಗಿಯಬೇಕಿತ್ತು. ಆದರೆ, ಜಾತಿ ಸಮೀಕರಣದ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಇದೀಗ ಬರುವ ಜು.3ರಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗುವುದರಿಂದ ಅಷ್ಟರೊಳಗಾಗಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲೇಬೇಕಾಗಿದೆ. ಹೀಗಾಗಿ, ಶಾಸಕಾಂಗ ಪಕ್ಷದ ನಾಯಕ, ನೂತನ ರಾಜ್ಯಾಧ್ಯಕ್ಷ ಹುದ್ದೆಗೆ ಹೆಚ್ಚ ಕಡಮೆ ಏಕಕಾಲದಲ್ಲೇ ನೇಮಕಗೊಳ್ಳುವ  ಹೆಚ್ಚು ಎಂದು ಹೇಳಲಾಗ್ತಿದೆ.

ಇದು ಕೂಡ ಪಕ್ಷದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿದು ಬರ್ತಾ ಇದೆ.. ಪಕ್ಷದ ಹಾಲಿ  ರಾಜ್ಯಾಧ್ಯಕ್ಷ ನಳಿನ್‌ ಅವಧಿ ಈಗಾಗಲೇ ಮುಗಿದಿದ್ದು, ಹೊಸಬರ ಹುಡುಕಾಟ ನಡೆದಿದೆ. ವಿಪಕ್ಷನಾಯಕ ಜವಾಬ್ದಾರಿ ಹೊರುವ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯೂ ಆಗಬೇಕಾಗಿದೆ. ಹೀಗಾಗಿ, ಈ ಎರಡೂ ಸ್ಥಾನಗಳಿಗೆ ತಮಗೆ ಬೇಕಾದವರನ್ನು ಆಯ್ಕೆ ಮಾಡಬೇಕು ಅಥವಾ ತಮಗೆ ಬೇಡವಾದವರು ನೇಮಕವಾಗದಂತೆ ತಡೆಯಬೇಕು ಎಂದು ಉದ್ದೇಶದಿಂದ ಅಂತರಿಕ ಜಿದ್ದಾಜಿದ್ದಿ  ಸಹ ಭರದಿಂದ ಮುಂದುವರೆದಿದ್ಯಾ ಎಂಬ ಅನುಮಾನ‌ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments