Webdunia - Bharat's app for daily news and videos

Install App

ಕುಸಿದ ಕಟ್ಟಡದ ಪ್ರದೇಶ ಸಂಪೂರ್ಣ ಪಾಲಿಕೆ ವಶಕ್ಕೆ: ತೆರವು ಕಾರ್ಯ

Webdunia
ಮಂಗಳವಾರ, 28 ಸೆಪ್ಟಂಬರ್ 2021 (17:15 IST)
ಬೆಂಗಳೂರು: ಲಕ್ಕಸಂದ್ರದಲ್ಲಿ ಏಕಾಕೀ ಬಿಲ್ಡಿಂಗ್ ಕುಸಿದು ಬಿದ್ದ ಪರಿಣಾಮ ನಗರದ ಜನತೆ ಸಾಕಷ್ಟು ಆತಂಕಕ್ಕೆ ಒಳಗಾಗಿದ್ದರು. ಈ ಕುರಿತು ಪಾಲಿಕೆ ಸ್ಪಷ್ಟನೆ ನೀಡಿದ್ದು, ಯಾವದೇ ಆಸ್ತಿ ಪಾಸ್ತಿ ಪ್ರಾಣಹಾನಿ ಸಂಭವಿಸಿಲ್ಲ. ಸಂಪೂರ್ಣ ಕಟ್ಟಡವನ್ನು ವಶಕ್ಕೆ ಪಡೆಯಿರಿ ಅವಶೇಷಗಳ ತೆರವು ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ ಎಂದು ತಿಳಿಸಲಾಗಿದೆ.   
 
ನಗರದ ಲಕ್ಕಸಂದ್ರದಲ್ಲಿ ಇದ್ದಕ್ಕಿದ್ದಂತೆ 3 ಮಹಡಿ ಕಟ್ಟಡ 1962 ರಲ್ಲಿ ನಿರ್ಮಿಸಲಾಗಿದೆ. ಈ ಕಟ್ಟಡದಲ್ಲಿ ಮೆಟ್ರೋ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ವಾಸಿಸುತ್ತಿದ್ದರು. ಬೆಳಿಗ್ಗೆ ಕಟ್ಟಡ ವಾಲಿದ್ದರಿಂದ ಅದರಲ್ಲಿದ್ದ 70 ಕಾರ್ಮಿಕರನ್ನು ತೆರವು ಮಾಡಿ ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ. ಮಾಜಿ ಸಚಿವ ರಾಮಲಿಂಗಾರೆಡ್ಡಿ ಮನೆ ಎದುರೇ ಈ ಘಟನೆ ನೆಡೆದಿತ್ತು. 
 
ಈ ಕುರಿತು ಪಾಲಿಕೆ ವಿವರವಾದ ಸ್ಪಷ್ಟನೆ ನೀಡಿದ್ದು ಬಿಬಿಎಂಪಿ ದಕ್ಷಿಣ ವಲಯದ ವಾರ್ಡ್ ಸಂಖ್ಯೆ 145ರ ವ್ಯಾಪ್ತಿಯ 7ನೇ ಮುಖ್ಯರಸ್ತೆ, 15ನೇ ಕ್ರಾಸ್, ಲಕ್ಕಸಂದ್ರದಲ್ಲಿ ಸುಮಾರು 70 ವರ್ಷಗಳ ಹಳೆಯ ಶಿಥಿಲಾವ್ಯವಸ್ಥೆಯಲ್ಲಿರುವ 3 ಅಂತಸ್ತಿನ ಕಟ್ಟಡ ಬೆಳಿಗ್ಗೆ ಸುಮಾರು 10. 30 ರ ಸಮಯದಲ್ಲಿ ಕುಸಿದು ಬಿದ್ದಿದೆ. ಖಾಲಿ ಇರುವ ಕಟ್ಟಡವನ್ನು ಮೆಟ್ರೋ ಕಾಮಗಾರಿ ಮಾಡುತ್ತಿದ್ದ ಕಾರ್ಮಿಕರುಗಳಿಗೆ ಬಾಡಿಗೆಗೆ ಕಟ್ಟಡದ ಮಾಲೀಕ ನೀಡಿದ್ದ. ಮೆಟ್ರೋ ಕಾಮಗಾರಿಯ ಕಾರ್ಮಿಕರುಗಳು ಕೆಲಸಕ್ಕೆ ಹೋಗಿದ್ದರಿಂದ ಮತ್ತು  ಕಟ್ಟಡದಲ್ಲಿ ಬಹುತೇಕ ಕಾರ್ಮಿಕರು ಇಲ್ಲದೇ ಇದ್ದಿದ್ದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಯಾವುದೇ ಆಸ್ತಿ-ಪ್ರಾಸ್ತಿಗೆ ಹಾನಿ ಸಂಭವಿಸಿಲ್ಲ.  ಸುತ್ತಮುತ್ತಲಿನ ಸಾರ್ವಜನಿಕರಿಗೆ ಕೂಡ  ಯಾವುದೇ ತೊಂದರೆಯಾಗಿಲ್ಲ ಎಂದಿದೆ.
 
ಪೊಲೀಸ್ ಠಾಣೆಗೆ ದೂರು: 
 
ಸ್ಥಳಕ್ಕೆ ಶಾಸಕ ಉದಯ್ ಗರುಡಾಚಾರ್ ಭೇಟಿ ನೀಡಿ ತಪಾಸಣೆ ಮಾಡಿದ್ದಾರೆ. ಈ  ಕಟ್ಟಡದ ಮಾಲೀಕ ಸುರೇಶ್  ಶಿಥಿಲಾವ್ಯವಸ್ಥೆಯಲ್ಲಿರುವ ಕಟ್ಟಡವನ್ನು 50-60 ಜನರಿಗೆ ವಾಸ್ತವ್ಯ ಮಾಡಲು ಬಾಡಿಗೆಗೆ ನೀಡಿ ಪ್ರಾಣಹಾನಿಗೆ ಕಾರಣ ಆಗುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಇದೀಗ ಪೊಲೀಸರು ಎಫ್.ಐ.ಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ  ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 
 
ರಾತ್ರಿ ಕುಸಿದಿದ್ದರೆ 50 ಕ್ಕೂ ಹೆಚ್ಚು ಜನರ ಸಾವು: 
 
ವಿಲ್ಸನ್ ಗಾರ್ಡನ್ ಬಳಿಯ ಲಕ್ಕಸಂದ್ರದ 7 ನೇ ಮುಖ್ಯ ರಸ್ತೆ, 15 ನೇಯ ಅಡ್ಡ ರಸ್ತೆಯಲ್ಲಿದ್ದ ಈ ಕಟ್ಟಡದ 1962 ರಲ್ಲಿ ನಿರ್ಮಿಸಲಾದ ಘಟಕ. ಸುರೇಶ್ ಎಂಬುವವರಿಗೆ ಸೇರಿದ ಈ ಕಟ್ಟಡದಲ್ಲಿ ಮೆಟ್ರೋ ಕಾರ್ಮಿಕರು ವಾಸವಾಗಿದ್ದರು. ಕಟ್ಟಡ ವಾಲಿದ ಸಮಯದಲ್ಲಿ ಬೆಳಿಗ್ಗೆ ಕಾರ್ಮಿಕರನ್ನು ಕಟ್ಟಡದಿಂದ ತೆರವು ಮಾಡಲಾಗುತ್ತಿದೆ. ಮುಂಜಾಗ್ರತೆಯಿಂದ ಕಾರ್ಮಿಕರನ್ನು ಮೊದಲೇ ತೆರವುಗೊಳಿಸಿದ್ದರಿಂದ ಭಾರೀ ದುರಂತ ತಪ್ಪಿತು. ಈ ಮೂರು ಅಂತಸ್ತಿನ ಕಟ್ಟಡದಲ್ಲಿ ಸುಮಾರು 70 ಮಂದಿ ಕಾರ್ಮಿಕರು ವಾಸವಿದ್ದರು. ಅಕಸ್ಮಾತ್ ಕಟ್ಟಡ ರಾತ್ರಿ ವೇಳೆ ಕುಸಿದಿದ್ದರೆ 50 ಕ್ಕಿಂತ ಹೆಚ್ಚು ಕಾರ್ಮಿಕರು ಸಾವನ್ನಪ್ಪುವ ಸಾಧ್ಯತೆಯಿದೆ ಎಂದು ಆತಂಕದ ಜನರು ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments