Webdunia - Bharat's app for daily news and videos

Install App

ಕಾಲೇಜು ವಿದ್ಯಾರ್ಥಿನಿ ಮೇಲೆ ವಿದ್ಯುತ್ ತಂತಿ ಪ್ರವಹಿಸಿ ಗಂಭೀರ ಗಾಯ

Webdunia
ಮಂಗಳವಾರ, 22 ಆಗಸ್ಟ್ 2023 (19:04 IST)
ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ವಿದ್ಯುತ್ ತಂತಿ ಪ್ರವಹಿಸಿ ಗಂಭೀರ ಗಾಯಗೊಂಡಿರುವ ಘಟನೆ ಸುದ್ದುಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.ನಗರದ ಕ್ರೈಸ್ಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಪ್ರಿಯಾಳನ್ನ ಸಮೀಪದ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.‌ ಮುಖ ಸೇರಿ ದೇಹದ ಇನ್ನಿತರ ಭಾಗಗಳಲ್ಲಿ‌ ವಿದ್ಯುತ್ ಹರಿದ ಹಿನ್ನೆಲೆ ಶೇ.40ರಷ್ಟು ಸುಟ್ಟ ಗಾಯವಾಗಿದೆ.
 
ಇಂದು ಮಧ್ನಾಹ್ಯ ರಸ್ತೆಯೊಂದರಲ್ಲಿ ಬರುತ್ತಿದ್ದ ಕ್ಯಾಂಟರ್ ವಾಹನದ ಚಕ್ರಕ್ಕೆ‌ ಕೆಳಗೆ ಬಿದ್ದಿದ್ದ ವೈರ್ ಸಿಲುಕಿದೆ. ಈ ವೇಳೆ ಲೈಟ್ ಕಂಬಕ್ಕೆ ಆ ವೈರ್  ಸುತ್ತಿಕೊಂಡಿದೆ.‌ ವಾಹನ ಮುಂದಾಗುತ್ತಿದ್ದಂತೆ ಬಿಗಿಯಾಗಿದ್ದು ವಿದ್ಯುತ್ ಕಂಬ ನೆಲಕ್ಕುರುಳಿದೆ. ಈ ವೇಳೆ‌‌ ಅದೇ ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ ವಿದ್ಯುತ್ ತಂತಿ ವಿದ್ಯಾರ್ಥಿನಿ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನ ತಕ್ಷಣ ಸಾಗರ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಘಟನೆ ಬಳಿಕ ಬೆಸ್ಕಾಂ ಸಿಬ್ಬಂದಿ ಆಗಮಿಸಿ ಶಿಥಿಲಗೊಂಡಿರುವ ಕಂಬವನ್ನು ತೆರವುಗೊಳಿಸಿದ್ದಾರೆ.  ಇನ್ನು ವಿದ್ಯೂತ್ ಪ್ರವಹಿಸಿದ ಹಿನ್ನಲೆ ವಿದ್ಯಾರ್ಥಿನಿಗೆ ಶೇಖಡ 40 ರಷ್ಟು ಸುಟ್ಟ ಗಾಯಗಳಾಗಿವೆ . ಹೀಗಾಗಿ ಪ್ರಥಮ ಚಿಕಿತ್ಸೆಯ ಬಳಿಕ  ಹೆಚ್ಚಿನ ಚಿಕಿತ್ಸೆಗೆ ಸಾಗರ್ ಆಸ್ಪತ್ರೆಯಿಂದ ಸೆಂಟ್ ಜಾನ್ಸ್ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.  ಇನ್ನು ವೈರ್ ಎಳೆದು ಬೀಳುವಷ್ಟರ ಮಟ್ಟಿಗೆ ಲೈಟ್ ಕಂಬ ಶಿಥಿಲಗೊಂಡಿದೆ ಎಂದರೆ ಬೆಸ್ಕಾಂ ಎಷ್ಟರ ಮಟ್ಟಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ .ಈ ಸಂಬಂಧ ಸುದ್ಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

ಮುಂದಿನ ಸುದ್ದಿ
Show comments