Webdunia - Bharat's app for daily news and videos

Install App

ಮದುವೆಗೆ ಬಂದವರು ಮಸಣಕ್ಕೆ!

Webdunia
ಮಂಗಳವಾರ, 17 ಮೇ 2022 (08:44 IST)
ಗದಗ : ಕುರಿ ಮೇಯಿಸಲು ಹೋದ ಐವರು ಬಾಲಕಿಯರಲ್ಲಿ ಮೂವರು ಕೃಷಿ ಹೊಂಡದ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ನಡೆದಿದೆ.

5 ಬಾಲಕಿಯರು ಒಟ್ಟಾಗಿ ಕುರಿ ಮರಿಗಳನ್ನು ಮೇಯಿಸಲು ಊರ ಪಕ್ಕಕ್ಕೆ ಹೋಗಿದ್ದರು. ಈ ವೇಳೆ ಜಮೀನಿನಲ್ಲಿದ್ದ ಕೃಷಿ ಹೊಂಡ ನೋಡಿ ನೀರು ಕುಡಿಯಲು ಹೋದ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ಅಂಕಿತಾ ಲಮಾಣಿ(13), ಸುನಿತಾ ಲಮಾಣಿ(11) ಹಾಗೂ ಸುನಿತಾ(10) ಮೃತ ಬಾಲಕಿಯರು.

ಬಾಲಕಿಯರು ಗೋವಾದಲ್ಲಿ ವಾಸವಿದ್ದರು. 22ರಂದು ನಡೆಯಲಿದ್ದ ಚಿಕ್ಕಪ್ಪನ ಮದುವೆ ಸಲುವಾಗಿ ಪಾಲಕರೊಂದಿಗೆ ಅತ್ತಿಕಟ್ಟಿ ಗ್ರಾಮಕ್ಕೆ ಬಂದಿದ್ದರು. ಮೃತ ಬಾಲಕಿಯರಲ್ಲಿ ಅಂಕಿತಾ ಹಾಗೂ ಸುನಿತಾ ಸಹೋದರಿಯರು.

ಮತ್ತೋರ್ವ ಮೃತ ಬಾಲಕಿ ಸುನಿತಾ ಡೋಣಿ ತಾಂಡ ನಿವಾಸಿ. ಮದುವೆ ಮನೆಯಲ್ಲಿ ಒಟ್ಟಾಗಿದ್ದ ಬಾಲಕಿಯರು ಒಟ್ಟಾಗಿ ಸಂಜೆ ಕುರಿ ಮರಿಗಳನ್ನು ಮೇಯಿಸಲು ಹೋಗಿದ್ದರು.

ಸ್ಥಳೀಯ ಬಸವರಾಜ್ ಲಮಾಣಿ ಎಂಬವರ ಜಮೀನಿನಲ್ಲಿದ್ದ ಕೃಷಿ ಹೊಂಡಕ್ಕೆ ಮಕ್ಕಳು ಇಳಿದಿರುವುದನ್ನು ಚಿಕ್ಕಪ್ಪ ಗೋವಿಂದ ಲಮಾಣಿ ನೋಡಿದ್ದಾರೆ. ಸ್ಥಳಕ್ಕೆ ಬಂದಾಗ ಮಕ್ಕಳು ನೀರಲ್ಲಿ ಮುಳುಗಿದ್ದು ತಿಳಿದಿದೆ. ಈ ವೇಳೆ ಇಬ್ಬರನ್ನು ರಕ್ಷಣೆ ಮಾಡಿದ್ದು, ಉಳಿದ ಬಾಲಕಿಯರು ಮುಳುಗಿರುವುದನ್ನು ಕುಟುಂಬಸ್ಥರಿಗೆ ಹಾಗೂ ಸ್ಥಳೀಯರಿಗೆ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಮುಂದಿನ ಸುದ್ದಿ
Show comments