Select Your Language

Notifications

webdunia
webdunia
webdunia
webdunia

ಎಲ್ಲೂ ಹೋಗಬೇಡಿ : ನಿಮ್ಮನೆಗೆ ಬರುತ್ತೆ ಹಣ

ಎಲ್ಲೂ ಹೋಗಬೇಡಿ : ನಿಮ್ಮನೆಗೆ ಬರುತ್ತೆ ಹಣ
ಬೀದರ , ಗುರುವಾರ, 14 ಮೇ 2020 (21:01 IST)
ಕೋವಿಡ್-19 ಹಿನ್ನೆಲೆಯಲ್ಲಿ ವಿವಿಧ ಸಾಮಾಜಿಕ ಭದ್ರತೆ  ಯೋಜನೆಗಳಡಿಯ ಪಿಂಚಣಿ  ಪಡೆಯುತ್ತಿರುವ ಫಲಾನುಭವಿಗಳಿಗೆ ನೇರವಾಗಿ ಅವರ ಮನೆ ಬಾಗಿಲಿಗೆ ಪಿಂಚಣಿ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.

ಹೀಗಂತ ಬೀದರ್ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ 60 ವರ್ಷಕ್ಕಿಂತ ಮೇಲ್ಪಟ್ಟ ವಯೋವೃದ್ಧರು, ವಿಧವೆಯರು, ಅಂಗವಿಕಲ ವೇತನ ಪಡೆಯುತ್ತಿರುವ ಪಿಂಚಣಿದಾರರು  ಕೋವಿಡ್-19 ಇರುವ ಪ್ರಯುಕ್ತ ತಮ್ಮ ಮನೆಯಲ್ಲಿಯೇ ಇದ್ದು ಕೋವಿಡ್-19ರ ನಿಯಮಗಳನ್ನು ಪಾಲಿಸಬೇಕು.

ಯಾವುದೇ ರಾಷ್ಟ್ರೀಕೃತ ಬ್ಯಾಂಕಿನ ಖಾತೆಯಲ್ಲಿ ಜಮೆಯಾಗಿರುವ ತಮ್ಮ ಮಾಸಿಕ ಪಿಂಚಣಿಯನ್ನು ತಮ್ಮ ವ್ಯಾಪ್ತಿಯಲ್ಲಿ ಬರುವ ಅಂಚೆ ಕಚೇರಿಯ ಪೋಸ್ಟ್ ಮ್ಯಾನ್‌ರವರು ತಮ್ಮ ಮನೆಯ ಬಾಗಿಲಿಗೆ ಬಂದು ತಲುಪಿಸುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಪತ್ರಕರ್ತೆಯರ ಅಹವಾಲು ಸ್ವೀಕರಿಸಿ ಧೈರ್ಯ ತುಂಬಿದ ಡಿಸಿಎಂ