Select Your Language

Notifications

webdunia
webdunia
webdunia
webdunia

'ಕಮಿಷನ್ ಆರೋಪ ಸುಳ್ಳು ಎನ್ನಲ್ಲ'

'ಕಮಿಷನ್ ಆರೋಪ ಸುಳ್ಳು ಎನ್ನಲ್ಲ'
bangalore , ಮಂಗಳವಾರ, 19 ಏಪ್ರಿಲ್ 2022 (20:37 IST)
ಮಾಜಿ ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ ಮಾಡಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಕೇಸ್​​ ತನಿಖೆ ನಡೆಯುತ್ತಿದೆ. ಈ ಬೆನ್ನಲ್ಲೇ ಇದೀಗ ಸ್ವಾಮೀಜಿಗಳು ಸಹ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿ ಶಾಕ್ ನೀಡಿದ್ದಾರೆ. ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಈ ಆರೋಪ ಮಾಡಿದ್ದು, ಮಠಗಳಿಗೆ ಅನುದಾನ ಬಿಡುಗಡೆ ಮಾಡಬೇಕಾದರೂ 30% ಕಮೀಷನ್ ನೀಡಲೇಬೇಕು ಎಂದು ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈ ಆರೋಪವನ್ನು ಸುಳ್ಳು ಎಂದು ಹೇಳಲ್ಲ. ಆದರೆ ಇದಕ್ಕೆ ಸಂಬಂಧಿಸಿದಂತೆ ಮೊದಲು ದಾಖಲೆಗಳನ್ನು ನೀಡಲಿ. ಈ ವಿಚಾರವನ್ನು ಯಾಕೆ ಹೇಳಿದರು ಎಂಬುದನ್ನು ಅವರೇ ಹೇಳಬೇಕು ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದಿಂಗಾಲೇಶ್ವರ ಶ್ರೀ ವಿರುದ್ಧ ಬೈರತಿ ಕಿಡಿ