Webdunia - Bharat's app for daily news and videos

Install App

ನಾಮ ನಿರ್ದೇಶಿತರಿಗೆ ಮತದಾನದ ಹಕ್ಕು ನೀಡಬಾರದು: ರಿಟ್ ಅರ್ಜಿ ಸಲ್ಲಿಕೆ

Webdunia
ಶನಿವಾರ, 5 ಸೆಪ್ಟಂಬರ್ 2015 (17:17 IST)
ರಾಜ್ಯ ವಿಧಾನ ಪರಿಷತ್‌ಗೆ ಸರ್ಕಾರವೇ ನೇರವಾಗಿ ನಾಮ ನಿರ್ದೇಶನ ಮಾಡಲಾಗಿರುವ ಎಲ್ಲಾ ಸದಸ್ಯರುಗಳು ಬಿಬಿಎಂಪಿ ಮೇಯರ್ ಆಯ್ಕೆ ಚುನಾವಣೆಯಲ್ಲಿ ಹೊಂದಿರುವ ಮತದಾನದ ಹಕ್ಕನ್ನು ಪ್ರಶ್ನಿಸಿ ಬಿಜೆಪಿ ನಾಯಕ ಗೂಳಿಹಟ್ಟಿ ಶೇಖರ್ ಹಾಗೂ ಇತರರು ಹೈಕೋರ್ಟ್‌ ಮೆಟ್ಟಿಲೇರಿದ್ದು, ತಡೆ ನೀಡುವಂತೆ ಇಂದು ರಿಟ್ ಅರ್ಜಿ ಸಲ್ಲಿಸಿದ್ದಾರೆ.  
 
ದೂರುದಾರರು, ನಾಮ ನಿರ್ದೇಶಿತರಾದ ತಾರಾ, ವಿ.ಎಸ್, ಉಗ್ರಪ್ಪ, ಜಯಮಾಲ ಅವರನ್ನು ನೇರವಾಗಿ ಅವರ ಸಾಧನೆಯನ್ನು ಪರಿಗಣಿಸಿ ಸರ್ಕಾರವೇನೇರವಾಗಿ ಆರಿಸಿದೆ. ಆದರೆ ಅವರು ಜನತೆಯನ್ನು ಪ್ರತಿನಿಧಿಸುವಂತಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ಮೇಯರ್ ಚುನಾವಣಾ ಸಂದರ್ಭದಲ್ಲಿರುವ ಮತದಾನದ ಹಕ್ಕನ್ನು ನೀಡಬಾರದು ಎಂದು ತಮ್ಮ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ. 
 
ಇನ್ನು ಸಂಸದರಾದ ವೀರಪ್ಪ ಮೊಯ್ಲಿ ಮತ್ತು ಡಿ.ಕೆ.ಸುರೇಶ್ ಅವರೂ ಕೂಡ ಮತದಾನ ಮಾಡುವ ಹಕ್ಕನ್ನು ಹೊಂದಿದ್ದು, ಅವರಿಗೂ ಕೂಡ ಮತದಾನದ ಹಕ್ಕನ್ನು ನೀಡಬಾರದು ಎಂದು ಮನವಿ ಮಾಡಿರುವ ದೂರು ದಾರರು, ಅವರು ಜನತೆಯನ್ನು ಪ್ರತಿನಿಧಿಸಿದರೂ ಕೂಡ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಜನತೆಗಿಂತ ಹೆಚ್ಚಾಗಿ ಇತೆರೆ ಜಿಲ್ಲೆಗಳ ಜನ ಸಮೂಹವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೂ ಕೂಡ ಮತದಾನದ ಹಕ್ಕನ್ನು ನೀಡಬಾರದು ಎಂದು ಮನವಿ ಮಾಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments