Webdunia - Bharat's app for daily news and videos

Install App

ಕರ್ನಾಟಕ ಬಂದ್ ಅಂತ ಸಾರ್ವಜನಿಕರ ಆಸ್ತಿಗೆ ಡ್ಯಾಮೇಜ್ ಮಾಡಿದ್ರೋ ಕಾದಿದೆ ಶಿಕ್ಷೆ

Krishnaveni K
ಶುಕ್ರವಾರ, 21 ಮಾರ್ಚ್ 2025 (16:40 IST)
ಬೆಂಗಳೂರು: ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ಇದನ್ನೇ ಬಂಡವಾಳವಾಗಿಟ್ಟುಕೊಂಡು ಸಾರ್ವಜನಿಕರ ಆಸ್ತಿ ಪಾಸ್ತಿಗೆ ಹಾನಿ ಮಾಡುವ ಕಿಡಿಗೇಡಿಗಳಿಗೆ ನಗರ ಪೊಲೀಸ್ ಕಮಿಷನರ್ ಬಿ ದಯಾನಂದ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ ವಿರೋಧಿಸಿ ನಾಳೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆನೀಡಿವೆ. ಆದರೆ ಬಂದ್ ನೆಪದಲ್ಲಿ ಕೆಲವರು ಕಲ್ಲು ತೂರಾಟ ನಡೆಸಿ ಸಾರ್ವಜನಿಕರ ಆಸ್ತಿ ಪಾಸ್ತಿಗೆ ಹಾನಿ ಮಾಡುತ್ತಾರೆ. ಒಂದು ವೇಳೆ ಈ ರೀತಿ ಏನಾದರೂ ಮಾಡಿದಲ್ಲಿ ಅವರೇ ನಷ್ಟ ಭರಿಸಿಕೊಡಬೇಕಾಗುತ್ತದೆ ಎಂದು ಕಮಿಷನರ್ ಎಚ್ಚರಿಕೆ ನೀಡಿದ್ದಾರೆ.

ಇನ್ನು, ಬಂದ್ ಗೆ ಬೆಂಬಲ ಸೂಚಿಸಿದ್ದ ಖಾಸಗಿ ಬಸ್ ಗಳ ಒಕ್ಕೂಟ ಬಸ್ ಸಂಚಾರವಿರಲ್ಲ ಎಂದಿತ್ತು. ಆದರೆ ಈಗ ಕಮಿಷನರ್ ಎಚ್ಚರಿಕೆ ನೀಡಿದ್ದು ಸಾರಿಗೆ ಸಂಘಟನೆಗಳಿಗೆ ಪತ್ರ ಬರೆದು ಬಸ್ ಸಂಚಾರ ಸ್ಥಗಿತಗೊಳಿಸದೇ ಇರಲು ಸೂಚಿಸಿದ್ದಾರೆ.

ಹೀಗಾಗಿ ನಾಳೆ ಖಾಸಗಿ ಬಸ್ ಸಂಚರಿಸಲಿದೆ. ನಾವು ನೈತಿಕ ಬೆಂಬಲ ನೀಡಲಿದ್ದೇವೆ. ಆದರೆ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಬಸ್ ಓಡಾಟವಿರಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments