Webdunia - Bharat's app for daily news and videos

Install App

ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್ ಗಳ ಉಗ್ರಾಣದ ಉದ್ಘಾಟನೆ ಮಾಡಿದ ಆಯುಕ್ತರು

Webdunia
ಗುರುವಾರ, 2 ಫೆಬ್ರವರಿ 2023 (18:19 IST)
2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಗೆ ಬರುವ 7 ವಿಧಾನಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್ ಗಳ ಉಗ್ರಾಣಕ್ಕಾಗಿ ಸರ್ವೇ ನಂಬರ್ 77ಪಿಲ್ಲಹಳ್ಳಿ ಗ್ರಾಮ, ದಾಸನಪುರ ಹೋಬಳಿ, ಬೆಂಗಳೂರು ಉತ್ತರ ತಾ. ವ್ಯಾಪ್ತಿಯಲ್ಲಿ 2 ಎಕರೆ ಪ್ರದೇಶದಲ್ಲಿ ಸ್ಥಾಪಿಸಿರುವ ಕಟ್ಟಡದ ಉದ್ಘಾಟನೆಯನ್ನು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ನೆರವೇರಿಸಿದ್ದಾರೆ. ಇನ್ನು ಉದ್ಘಾಟನೆಯ ನಂತರ ಮಾತನಾಡಿದ ಅವರು  ಜಿಲ್ಲಾ ಚುನಾವಣಾ ಅಧಿಕಾರಿ-ಬೆಂಗಳೂರು ಇವರ ವ್ಯಾಪ್ತಿಯಲ್ಲಿ 4 ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳು ಬರಲಿದ್ದು,4 ಉಗ್ರಾಣಗಳ ಪೈಕಿ ಪಿಲ್ಲಹಳ್ಳಿ ಗ್ರಾಮದಲ್ಲಿ ಹೊಸದಾಗಿ ಬೆಂಗಳೂರು ನಗರ ಜಿಲ್ಲೆಯ ಉಗ್ರಾಣವನ್ನು ಸ್ಥಾಪಿಸಲಾಗಿದ್ದು .ಬೆಂಗಳೂರು ನಗರ ವ್ಯಾಪ್ತಿಗೆ ಯಲಹಂಕ, ಯಶವಂತಪುರ, ಬ್ಯಾಟರಾಯನಪುರ, ಮಹದೇವಪುರ, ದಾಸರಹಳ್ಳಿ, ಆನೇಕಲ್ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳು ಬರಲಿವೆ. ಉಗ್ರಾಣದ ಸ್ಥಳದಲ್ಲಿ ಅಗತ್ಯ ಸಿಸಿ ಟಿವಿ, ಪೊಲೀಸ್ ಭದ್ರತಾ ಸಿಬ್ಬಂದಿಯ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈಗಾಗಲೇ ಬಂದಿರುವ ಇವಿಎಂಗಳನ್ನು ಹಳೆಯ ಉಗ್ರಾಣದಲ್ಲಿ ಶೇಖರಿಸಿಟ್ಟಿದ್ದು, ಅದನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments