ಕರ್ನಾಟಕದಲ್ಲಿನ ಕೋಮುಗಲಭೆ ಕುರಿತು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದರು. ಬಿಜೆಪಿ ಸರ್ಕಾರವಿದ್ದಾಗ ಅತಿ ಹೆಚ್ಚು ಕೋಮುಘರ್ಷಣೆಗಳು ನಡೆದಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಎನ್ಡಿಎ ಸರ್ಕಾರ ಬಂದ ಬಳಿಕ ಕೋಮುಗಲಭೆ ಹೆಚ್ಚಳವಾಗಿದೆ. ಬಿಜೆಪಿ ಪ್ರಬಲವಾಗಿರುವ ರಾಜ್ಯಗಳಲ್ಲಿ ಹೆಚ್ಚೆಚ್ಚು ಕೋಮುಗಲಭೆಗಳು ಸಂಭವಿಸುತ್ತಿವೆ.
ಕೋಮುಗಲಭೆ ಕಡಿಮೆಯಾಗಿದೆ ಎಂಬ ಸರ್ಕಾರದ ವಾದ ಸಂಪೂರ್ಣ ಸುಳ್ಳಾಗಿದೆ. ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿದ್ದಾಗ ಇಷ್ಟೊಂದು ಪ್ರಮಾಣದಲ್ಲಿ ಕೋಮುಗಲಭೆ ಸಂಭವಿಸಿರಲಿಲ್ಲ ಎಂದು ಖರ್ಗೆ ಹೇಳಿದರು.