ಕೋಮು ಸೌಹಾರ್ದತೆ ಕೆಡಿಸಿದ್ರೆ ಹುಷಾರ್ ಎಂದ ಎಸ್ ಪಿ

Webdunia
ಮಂಗಳವಾರ, 21 ಏಪ್ರಿಲ್ 2020 (15:11 IST)
ಕೋಮು ಸೌಹಾರ್ದತೆ ಕೆಡಿಸೋಕೆ ಮುಂದಾದರೆ ಹುಷಾರ್. ಹೀಗಂತ ಎಸ್ ಪಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೋಮು ಸೌಹಾರ್ದತೆ ಕೆಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಎಚ್ಚರಿಕೆ ನೀಡಿದ್ದಾರೆ.

ಕೊವಿಡ್- 19  ಸೋಂಕು ನಿವಾರಣೆಯು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದರೆ ಮಾತ್ರ ನಿರ್ಮೂಲನೆ ಸಾಧ್ಯವಾಗುತ್ತದೆ. ಒಂದೊಮ್ಮೆ ಜಾತಿ, ಧರ್ಮದ ಹೆಸರಿನಲ್ಲಿ ಕಿತ್ತಾಡಿದರೆ ಕೋವಿಡ್ ವಿರುದ್ಧದ ನಮ್ಮ ಹೋರಾಟ ವಿಫಲವಾಗಬಹುದು ಎಂದರು.

ಮುಸ್ಲಿಂ ಸಮುದಾಯದವರು ರಮಜಾನ್ ಹಬ್ಬ ಆಚರಣೆಗೆ ಸಂಬಂಧಿಸಿದಂತೆ ಈಗಾಗಲೇ ಇಲಾಖೆಯಿಂದ ಹಲವು ಸಲಹೆ ಸೂಚನೆಗಳನ್ನು ನೀಡಲಾಗಿದೆ. ಈ ಬಗ್ಗೆ ಮುಸ್ಲಿಂ ಸಮುದಾಯದ ಪ್ರಮುಖರೊಂದಿಗೂ ಮಾತುಕತೆ ಮಾಡಲಾಗಿದೆ ಎಂದರು.

ಲಾಕ್‌ಡೌನ್ ಉಲ್ಲಂಘನೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು ಐಎಂವಿ ಪ್ರಕರಣ ದಾಖಲಿಸಿ 3,65,೦೦೦ ರೂ. ದಂಡ ವಸೂಲಿ ಮಾಡಲಾಗಿದೆ.  209 ವಾಹನಗಳನ್ನು ಸೀಜ್ ಮಾಡಲಾಗಿದ್ದು, 53 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments