ಕೋಮು ಸೌಹಾರ್ದತೆ ಕೆಡಿಸಿದ್ರೆ ಹುಷಾರ್ ಎಂದ ಎಸ್ ಪಿ

Webdunia
ಮಂಗಳವಾರ, 21 ಏಪ್ರಿಲ್ 2020 (15:11 IST)
ಕೋಮು ಸೌಹಾರ್ದತೆ ಕೆಡಿಸೋಕೆ ಮುಂದಾದರೆ ಹುಷಾರ್. ಹೀಗಂತ ಎಸ್ ಪಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೋಮು ಸೌಹಾರ್ದತೆ ಕೆಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಎಚ್ಚರಿಕೆ ನೀಡಿದ್ದಾರೆ.

ಕೊವಿಡ್- 19  ಸೋಂಕು ನಿವಾರಣೆಯು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದರೆ ಮಾತ್ರ ನಿರ್ಮೂಲನೆ ಸಾಧ್ಯವಾಗುತ್ತದೆ. ಒಂದೊಮ್ಮೆ ಜಾತಿ, ಧರ್ಮದ ಹೆಸರಿನಲ್ಲಿ ಕಿತ್ತಾಡಿದರೆ ಕೋವಿಡ್ ವಿರುದ್ಧದ ನಮ್ಮ ಹೋರಾಟ ವಿಫಲವಾಗಬಹುದು ಎಂದರು.

ಮುಸ್ಲಿಂ ಸಮುದಾಯದವರು ರಮಜಾನ್ ಹಬ್ಬ ಆಚರಣೆಗೆ ಸಂಬಂಧಿಸಿದಂತೆ ಈಗಾಗಲೇ ಇಲಾಖೆಯಿಂದ ಹಲವು ಸಲಹೆ ಸೂಚನೆಗಳನ್ನು ನೀಡಲಾಗಿದೆ. ಈ ಬಗ್ಗೆ ಮುಸ್ಲಿಂ ಸಮುದಾಯದ ಪ್ರಮುಖರೊಂದಿಗೂ ಮಾತುಕತೆ ಮಾಡಲಾಗಿದೆ ಎಂದರು.

ಲಾಕ್‌ಡೌನ್ ಉಲ್ಲಂಘನೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು ಐಎಂವಿ ಪ್ರಕರಣ ದಾಖಲಿಸಿ 3,65,೦೦೦ ರೂ. ದಂಡ ವಸೂಲಿ ಮಾಡಲಾಗಿದೆ.  209 ವಾಹನಗಳನ್ನು ಸೀಜ್ ಮಾಡಲಾಗಿದ್ದು, 53 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments