Select Your Language

Notifications

webdunia
webdunia
webdunia
webdunia

ಗಲಭೆಯಲ್ಲಿ ಮತೀಯ ಸಂಘಟನೆಗಳ ಕೈವಾಡ: ಸಿಎಂ ಸಿದ್ದರಾಮಯ್ಯ

ಗಲಭೆಯಲ್ಲಿ ಮತೀಯ ಸಂಘಟನೆಗಳ ಕೈವಾಡ: ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಸೋಮವಾರ, 10 ಜುಲೈ 2017 (13:35 IST)
ಮಂಗಳೂರು ಭಾಗದಲ್ಲಿ ನಡೆದ ಹಿಂಸಾಚಾರದಲ್ಲಿ ಮತೀಯ ಶಕ್ತಿಗಳ ಕೈವಾಡವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದೆರೆಡು ತಿಂಗಳುಗಳಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಪಾಲ್ಗೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ವಾರ್ನಿಂಗ್ ನೀಡಿದ್ದೇನೆ ಎಂದರು.
 
ಕಾನೂನನ್ನು ಯಾರೇ ಕೈಗೆತ್ತಿಕೊಂಡರೂ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಪದೇ ಪದೇ ಅಪರಾಧಗಳಲ್ಲಿ ಭಾಗಿಯಾಗುವವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
 
ಮತೀಯ ಸಂಘಟನೆಗಳಲ್ಲಿರುವ ಗೂಂಡಾಗಳ ಚಲನವಲನಗಳ ಮೇಲೆ ನಿಗಾ ಇಡುವಂತೆ ಪೊಲೀಸ್, ಗುಪ್ತಚರ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮವರಿಗೆ ಮೆಡಿಕಲ್ ವೀಸಾ ಕೊಟ್ಟಿದ್ದೀವಿ, ಜಾಧವ್ ತಾಯಿಗೆ ವೀಸಾ ಕೊಟ್ಟಿಲ್ಲವೇಕೆ..? ಪಾಕಿಸ್ತಾನಕ್ಕೆ ಸುಷ್ಮಾ ಸ್ವರಾಜ್ ಪ್ರಶ್ನೆ