ಸಮುದಾಯ ಭವನ ಅಕ್ರಮ ನಿರ್ಮಾಣ: ಹೋರಾಟ

Webdunia
ಬುಧವಾರ, 11 ಜುಲೈ 2018 (17:38 IST)
ಗ್ರಾಮ ಪಂಚಾಯಿತಿ ಮತ್ತು ಜನ ಪ್ರತಿನಿಧಿಗಳಿಂದ ಮಹಾ ಮೋಸವಾಗಿದೆಂದು ಹಾವೇರಿ ಜಿಲ್ಲೆಯ ಕಬ್ಬುರಿನ ಸಿದ್ದೇಶ್ವರ  ತಾಂಡಾದಲ್ಲಿ ಗ್ರಾಮಸ್ಥರು  ಪ್ರತಿಭಟನೆ ನಡೆಸಿದರು. ಹಾವೇರಿ ಜಿಲ್ಲೆಯ ಕಬ್ಬೂರಿನ ಸಿದ್ದೇಶ್ವರ ತಾಂಡಾದಲ್ಲಿ ದೇವಸ್ಥಾನದ ಸರ್ವೆ ನಂಬರ್ ತೋರಿಸಿ ಸರ್ಕಾರಿ ಗೋಮಾಳದ ಜಾಗದಲ್ಲಿ ಗ್ರಾಮ ಪಂಚಾಯತಿ ಮತ್ತು ಜನ ಪ್ರತಿನಿಧಿಗಳು ಅಕ್ರಮವಾಗಿ ಸಮುದಾಯ ಭವನವನ್ನು  ನಿರ್ಮಾಣ ಮಾಡಿ, ಜನರಿಗೆ ಮೋಸವನ್ನು ಮಾಡಿದ್ದಾರೆಂದು ಗ್ರಾಮಸ್ಥರು  ಆರೋಪಿಸಿದ್ರು.

ಗ್ರಾಮ ಪಂಚಾಯಿತಿಯವರು ಲಕ್ಷಾಂತರ ರೂಪಾಯಿ ಅನುದಾನ ಪಡೆದು ನಿರ್ಮಾಣ ಮಾಡಿದ್ದು, ಸರ್ವೆ ನಂಬರ್ 131 ರ ಸರ್ವೆ ನಂಬರ್ ನಲ್ಲಿ ದೇವಸ್ಥಾನವನ್ನು ಬಿಟ್ಟು ಕಿಂಚಿತ್ತು ಜಾಗವಿಲ್ಲದ ದೇವಸ್ಥಾನ ತೋರಿಸಿ ಲಕ್ಷಾಂತರ ರೂಪಾಯಿ ಹಣವನ್ನು ಪಡೆದು 216 ರ ಸರ್ವೆ ನಂಬರ್ ನ ಸರ್ಕಾರಿ  ಗೋಮಾಳ ಜಾಗದಲ್ಲಿ ಸಮುದಾಯ ಭವನ ನಿರ್ಮಿಸಿದ್ದಾರೆ.

 
ಹೀಗೆ ಲಕ್ಷಾಂತರ ಹಣವನ್ನು ಖರ್ಚು ಮಾಡಿ ಅಭಿವೃಧ್ದಿ ಹೆಸರಿನಲ್ಲಿ ಗ್ರಾಮ ಪಂಚಾಯಿತಿಯು ಅಕ್ರಮವಾಗಿ  ಸಮುದಾಯ ಭವನ  ನಿರ್ಮಾಣ ಮಾಡಿ ಗ್ರಾಮಸ್ಥರಿಗೆ ಮೋಸ ಮಾಡಿ ಗೊಲ್ ಮಾಲ್ ಮಾಡುತ್ತಿದ್ದಾರೆ ಎಂದು ನಾಗರಿಕರು ಜನಪ್ರತಿನಿಧಿಗಳ ವಿರುದ್ದ ಪ್ರತಿಭಟನೆ ನಡೆಸಿದ್ರು. ಸಮುದಾಯ ಭವನ ಕಟ್ಟಿಸಿ ಅಂತಾ ಕೇಳಿದ್ರೆ ಹೀಗೆ ಸರ್ಕಾರಿ ಗೋಮಾಳದ ಜಾಗದಲ್ಲಿ ಭವನ ಕಟ್ಟಿಸಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ರು. ಇನ್ನಾದರೂ ಗ್ರಾಮ ಪಂಚಾಯತಿಯವರು ಇದರ ಬಗ್ಗೆ ಪರೀಶಿಲನೆ ನಡೆಸಿ ಸೂಕ್ತವಾದ ಕ್ರಮವನ್ನು  ತೆಗೆದುಕೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣ್ಣು ನೀಡಿ ಹಸಿವು ನೀಗಿಸುತ್ತಿದ್ದ ಅಜ್ಜಿ ಇನ್ನಿಲ್ಲ ಎಂದಾಗ ಕೋತಿ ನಡೆಸಿಕೊಂಡ ರೀತಿಗೆ ಕಣ್ಣೀರು ಬರುತ್ತೆ

ಶಾಸಕ ಪ್ರದೀಪ್ ಈಶ್ವರ್ ನಾಲಿಗೆಗೆ ಕಡಿವಾಣ ಹಾಕಲು ಹೇಳಿ: ಬಿಜೆಪಿ ದೂರು

ಅಸ್ಸಾಂನಲ್ಲಿ ಚಹಾ ಎಲೆ ಕಿತ್ತ ಪ್ರಧಾನಿ ಮೋದಿ, ಕಾರ್ಮಿಕರೊಂದಿಗೆ ಸೆಲ್ಫೀ: Video

ಗಾಯದ ಮೇಲೆ ಮತ್ತೆ ಬರೆ: ದ್ವಿಗುಣವಾದ ವಿಮಾನ ಇಂಧನ ದರ, ವಾಣಿಜ್ಯ ಸಿಲಿಂಡರ್‌ ಕೂಡ ತುಟ್ಟಿ

ಈ ಸರಕಾರ ಅಭಿವೃದ್ಧಿಶೂನ್ಯವಾಗಿದೆ ಎಂದು ಜನರು ಮಾತನಾಡುತ್ತಿದ್ದಾರೆ: ಅರವಿಂದ ಲಿಂಬಾವಳಿ

ಮುಂದಿನ ಸುದ್ದಿ
Show comments