ಸ್ಪರ್ಧಾತ್ಮಕ ಪರೀಕ್ಷೆಗಳ‌ ಆಮಿಷವೊಡ್ಡಿ ಹೆಚ್ಚು ಶುಲ್ಕ ಹೇಳಿದ್ರೆ ಹುಷಾರ್..!

Webdunia
ಭಾನುವಾರ, 5 ಜೂನ್ 2022 (20:19 IST)
ಸ್ಪರ್ಧಾತ್ಮಕ ಪರೀಕ್ಷೆಗಳ‌ ಆಮಿಷವೊಡ್ಡಿ ಹೆಚ್ಚು ಶುಲ್ಕ ವಸೂಲಿ‌ ಮಾಡಿದ್ರೆ ಅಂತಹ ಶಾಲೆಗಳ ಮಾನ್ಯತೆ ರದ್ದು ಮಾಡಲಾಗುತ್ತೆ ಅಂತಾ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಇದ್ರ ಜೊತೆಗೆ, ಇಂತಹ ಕಾನೂನು ಬಾಹಿರ ಚಟುವಟಿಕೆ ನಡೆಸುವ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ವಾರ್ನಿಂಗ್ ಮಾಡಲಾಗಿದೆ. ಈ ಬಗ್ಗೆ ಖಾಸಗೀ ಶಾಲೆಗಳು ಗರಂ ಆಗಿದ್ದು,ರಾಜ್ಯದಲ್ಲಿರುವ ಯಾವುದೇ ಪದವಿ ಪೂರ್ವ ಕಾಲೇಜುಗಳು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌, ಜೆಇಇ ಸೇರಿದಂತೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವೈಯಕ್ತಿಕವಾಗಿ ಆಗಲಿ ಅಥವಾ ಬೇರೆ ಕೋಚಿಂಗ್‌ ಸಂಸ್ಥೆಗಳ ಮೂಲಕವಾಗಲಿ ತರಬೇತಿ ನೀಡುವ, ತರಬೇತಿ ಹೆಸರಲ್ಲಿ ಹೆಚ್ಚು ಶುಲ್ಕ ವಸೂಲಿ ಮಾಡಿದರೆ ಅಂತಹ ಕಾಲೇಜುಗಳ ಮಾನ್ಯತೆ ರದ್ದು ಮಾಡಲಾಗುತ್ತೆ ಅಂತಾ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲ, ಇಂತಹ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗುವಂತಹ ಶಾಲಾ ಆಡಳಿತ ಮಂಡಳಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿಯೂ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ವಾರ್ನಿಂಗ್ ನೀಡಿದೆ.
ಕರೊನಾ ಕಾರಣದಿಂದ ಸುಮಾರಷ್ಟು ಜನ ಪೋಷಕರು ಸಂಕಷ್ಟದಲ್ಲಿದ್ದಾರೆ. ಇದ್ರ ನಡುವೆ ನಿಟ್, ಸಿಇಟಿ, ಜೆಇಇ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳ ಆಸೆಯನ್ನ ಪೋಷಕರಿಗೆ ತೋರಿಸಿ, ಹೆಚ್ಚಿನ ಹಣ ಕೀಳುವ ಕೆಲಸವನ್ನು ಈ ಹಿಂದೆ ಕೆಲವು ಖಾಸಗೀ ಶಾಲೆಗಳು ಮಾಡಿದ್ವು. ಹೀಗಾಗೀ ಶಿಕ್ಷಣ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಅಂತಹ ಶಾಲೆಗಳ ಮಾನ್ಯತೆ ರದ್ದು ಮಾಡುವ ವಾರ್ನಿಂಗ್ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಖಾಸಗೀ ಶಾಲೆಗಳ ಒಕ್ಕೂಟದ ( ಕ್ಯಾಮ್ಸ್ ) ಕಾರ್ಯದರ್ಶಿ, ಇದೊಂದು ಗಾಳಿಯಲ್ಲಿ ಗುಂಡು ಹೊಡೆಯುವ ಪ್ರಯತ್ನ, ಬೇರೆ ರಾಜ್ಯಗಳಿಂದ ಬಂದು ಜಾಹೀರಾತು ಹಾಕಿ ಇದನ್ನ ಮಾಡ್ತಾರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಿ ಅಂತಾ ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments