Webdunia - Bharat's app for daily news and videos

Install App

ಬಲವಂತವಾಗಿ ಮತಾಂತರ ಆರೋಪ ಮದನ್ ಬುರಡಿ ವಿರುದ್ಧ ದೂರು

Webdunia
ಬುಧವಾರ, 16 ನವೆಂಬರ್ 2022 (17:40 IST)
ಬಲವಂತ ಮತಾಂತರ ಆರೋಪ ಹಿನ್ನೆಲೆ, ಮದನ್ ಬುರಡಿ ವಿರುದ್ಧ ನಿನ್ನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಹಿಂದೂಪರ ಸಂಘಟನೆಗಳು ದೂರು ನೀಡಿವೆ. ಆ ದೂರಿಗೆ ಪ್ರತಿದೂರು ನೀಡಲು ಮದನ್ ಬುರಡಿ ಮುಂದಾಗಿದ್ದಾರೆ. ಸಿಕ್ಕಲಗಾರ ಸಮಾಜದವರನ್ನ ಬಲವಂತವಾಗಿ ಮತಾಂತರ ಮಾಡಿದ್ದಾರೆ, ಎಂದು ಮದನ್ ಬುರಡಿ ವಿರುದ್ಧ ದೂರು ನೀಡಿದ್ದರು. ಆದರೆ ಈ ಆರೋಪವನ್ನು ತಳ್ಳಿ ಹಾಕಿರುವ ಬುರಡಿ, ಪದೇ ಪದೇ ನನ್ನ ಮೇಲೆ ಈ ರೀತಿ ಆರೋಪ ಬರ್ತಿದೆ ಎಂದು ಪ್ರತಿದೂರು ನೀಡಿದ್ದಾರೆ. ‘ನಾನು ಹಿಂದೂ ಧರ್ಮದವನೇ, ಯಾರನ್ನೂ ಮತಾಂತರ ಮಾಡಿಲ್ಲ. ಮತಾಂತರ ಮಾಡಿದ ಸಾಕ್ಷಿ, ಪುರಾವೆ ಇದ್ದರೆ ಕಾನೂನು ಕ್ರಮ ಕೈಗೊಳ್ಳಿ. ನನ್ನ ಬೆಳವಣಿಗೆ ಸಹಿಸದ ನಮ್ಮ ಸಮಾಜದವರಿಂದಲೇ ನನ್ನ ವಿರುದ್ಧ ಷಢ್ಯಂತ್ರ ಮಾಡುತ್ತಿದ್ದಾರೆ. ACP ಕಚೇರಿಗೆ ತೆರಳಿ ಲಿಖಿತ ದೂರು ನೀಡಲಿದ್ದೇನೆ. ಪದೇ ಪದೇ ಪೊಲೀಸ್ ಠಾಣೆಗೆ ಕರೆಸಿ, ನನ್ನ ಮಾನಸಿಕ ಸ್ಥಿತಿಯನ್ನ ಕುಗ್ಗಿಸಲಾಗ್ತಿದೆ. ಒಂದು ವೇಳೆ ನಾನು ಏಸುನನ್ನ ಪೂಜಿಸಿದ್ದೇ ಆದರೆ, ಅದು ನನ್ನ ಸಾಂವಿಧಾನಿಕ ಹಕ್ಕು’ ಎಂದು ಮದನ್ ಬುರಡಿ ತಮ್ಮನ್ನ ಸಮರ್ಥಿಸಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments