Publish Date: Thu, 27 Apr 2023 (20:00 IST)
Updated Date: Thu, 27 Apr 2023 (19:46 IST)
ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ.ಚುನಾವಣೆ ಪ್ರಚಾರದ ವೇಳೆ ಅಮಿತ್ ಷಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಾಟೆಗಳು, ಘರ್ಷಣೆಗಳು, ಗಲಭೆಗಳು ಹೆಚ್ಚಾಗುತ್ತವೆ ಎಂಬ ಹೇಳಿಕೆ ಹಾಗೂ ವಿ ಸೋಮಣ್ಣ ಅವರು ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ಬೆದರಿಕೆ ಹಾಗೂ ಆಮಿಷವೊಡ್ಡಿರುವ ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ,ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ನಗರದ ಹೈ ಗ್ರೌಂಡ್ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಂತರ ಮಾತನಾಡಿದ ಡಿಕೆ ಶಿವಕುಮಾರ್ ನಮ್ಮ ರಾಜ್ಯ ಶಾಂತಿಯ ತೋಟ, ಹೀಗಿರುವಾಗ ಬಿಜೆಪಿ ನಾಯಕರು ಪ್ರಚೊಧನಕಾರಿ ಹೇಳಿಕೆ ನೀಡಿದ್ದಾರೆ.ಜನರ ಮೇಲೆ ಪ್ರಭಾವ ಬೀರುವ ಅಮೀತ್ ಶಾ ಮೇಲೆ ಕ್ರಮ ಆಗಬೇಕು ಎಂದು ಆಗ್ರಹಿಸಿದರು.