ಬಿಜೆಪಿ ನಾಯಕರಿಂದ ಆರ್.ಅಶೋಕ್ ವಿರುದ್ಧವೇ ಹೈಕಮಾಂಡ್‌ಗೆ ದೂರು

Webdunia
ಶನಿವಾರ, 4 ನವೆಂಬರ್ 2017 (12:15 IST)
ಬಿಜೆಪಿ ಪರಿವರ್ತನಾ ಯಾತ್ರೆಯ ಅವ್ಯವಸ್ಥೆಗೆ ಮಾಜಿ ಸಚಿವ ಆರ್.ಅಶೋಕ್ ಕಾರಣವೆಂದು ಬಿಜೆಪಿ ಮುಖಂಡರೇ ಹೈಕಮಾಂಡ್‌ಗೆ ದೂರು ನೀಡಿದ್ದಾರೆ.
ಬಿಜೆಪಿ ಪರಿವರ್ತನೆ ಯಾತ್ರೆಯಲ್ಲಿ ಎದುರಾದ ಹಲವು ದೋಷಗಳಿಗೆ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಆರ್.ಅಶೋಕ್ ನಡುವಿನ ಸಮನ್ವಯದ ಕೊರತೆ ಮೂಲ ಕಾರಣ ಎನ್ನಲಾಗುತ್ತಿದೆ. ಮತ್ತೊಂದೆಡೆ ಕರಂದ್ಲಾಜೆ ಸರ್ವಾಧಿಕಾರಿ ಧೋರಣೆಯಿಂದ ಯಾತ್ರಾ ಕಾರ್ಯಕ್ರಮ ವಿಫಲವಾಗಿದೆ ಎಂದು ಅಶೋಕ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಹಿರಿಯ ನಾಯಕ ಬಿ.ಎಲ್.ಸಂತೋಷ್ ಅವರನ್ನು ಕಾರ್ಯಕ್ರಮದಿಂದ ದೂರವಿಟ್ಟಿರುವುದು ಕೂಡಾ ಕಾರ್ಯಕ್ರಮದ ಅವ್ಯವಸ್ಥೆಗೆ ಕಾರಣವೆಂದು ಹೇಳಲಾಗುತ್ತಿದೆ. ಆದರೆ, ಇದೀಗ ಅಶೋಕ್ ಅವರಿಗೆ ವಿಫಲತೆಯ ಹೊಣೆಪಟ್ಟಿ ಹೊರಿಸಿ ಹೈಕಮಾಂಡ್‌ಗೆ ದೂರು ನೀಡಲಾಗಿದೆ ಎನ್ನಲಾಗುತ್ತಿದೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದಗೌಡ ಮತ್ತು ಬೆಂಗಳೂರಿನ ಶಾಸಕರು ಅಶೋಕ್ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಮುಂದಿನ ಸುದ್ದಿ
Show comments