Webdunia - Bharat's app for daily news and videos

Install App

ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನ ಪೊಲೀಸ್‌ ಠಾಣೆಗೆ ದೂರು, ಏನಿದು ಪ್ರಕರಣ ಗೊತ್ತ

Sampriya
ಶನಿವಾರ, 21 ಸೆಪ್ಟಂಬರ್ 2024 (18:00 IST)
ಬೆಂಗಳೂರು: ಅಮೆರಿಕ ಪ್ರವಾಸ ವೇಳೆ ದೇಶದಲ್ಲಿರುವ ಮೀಸಲಾತಿ ಬಗ್ಗೆ ಹೇಳಿಕೆ ನೀಡಿದ ಸಂಬಂಧ ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ನಾಯಕರು ದೂರು ನೀಡಿದ್ದಾರೆ.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜಕುಮಾರ್ ಪಾಟೀಲ್, ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ವಸಂತಕುಮಾರ್​ ಸೇರಿ ಬಿಜೆಪಿ ನಾಯಕರು ಹೈಗ್ರೌಂಡ್ಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆ ಹೀಗಿದೆ:  'ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ವ್ಯವಸ್ಥೆಯ ರದ್ದತಿ ಕುರಿತು ಕಾಂಗ್ರೆಸ್‌ ಪಕ್ಷ ಚಿಂತಿಸಲಿದೆ' ಎಂದು ಹೇಳಿದ್ದರು. ಆದರೆ ಈ ಬಗ್ಗೆ ಮತ್ತೇ ಸ್ಪಷ್ಟನೆ ನೀಡಿದ ರಾಹುಲ್‌ಗಾಂಧಿ ಅವರು, ನಾನು ಮೀಸಲಾತಿಗೆ ವಿರುದ್ಧವಾಗಿ ಇದ್ದೇನೆ ಎಂಬಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಮೀಸಲಾತಿ ಮಿತಿಯನ್ನು ನಾವು ಶೇ 50 ಮೀರಿ ವಿಸ್ತರಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.

ಇನ್ನೂ ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಬಿಜೆಪಿ ಭಾರೀ ಆಕ್ರೋಶ ಹೊರಹಾಕಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರ ಇಂತಹ ನಿಲುವು ಅವರ ಸಂವಿಧಾನ ವಿರೋಧಿ ಮನಃಸ್ಥಿತಿ ತೋರಿಸುತ್ತದೆ ಎಂದು ಉಪ ರಾಷ್ಟ್ರಪತಿ ಜಗದೀಪ್‌ ಧನ್‌ಕರ್ ಅವರು ಸಹ ರಾಹುಲ್‌ ಗಾಂಧಿ ಅವರನ್ನು ಟೀಕಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments