Select Your Language

Notifications

webdunia
webdunia
webdunia
webdunia

ನಟ ದರ್ಶನ್ ಅಭಿನಯದ ಒಡೆಯರ್ ಚಿತ್ರದ ಹೆಸರು ಬದಲಾಯಿಸುವಂತೆ ದೂರು ದಾಖಲು

ನಟ ದರ್ಶನ್ ಅಭಿನಯದ ಒಡೆಯರ್ ಚಿತ್ರದ ಹೆಸರು ಬದಲಾಯಿಸುವಂತೆ ದೂರು ದಾಖಲು
ಮೈಸೂರು , ಶುಕ್ರವಾರ, 27 ಜುಲೈ 2018 (15:49 IST)
ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯಿಸುತ್ತಿರುವ ಒಡೆಯರ್ ಚಿತ್ರದ ಹೆಸರನ್ನ ಬದಲಾಯಿಸುವಂತೆ ಕನ್ನಡ ಕ್ರಾಂತಿದಳ ಕೆ.ಆರ್ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ.

ವಿಧಾನ ಪರಿಷತ್ ಸದಸ್ಯ ಹಾಗೂ ಚಲನಚಿತ್ರ ನಿರ್ಮಾಪಕ ಸಂದೇಶ ನಾಗರಾಜ್ ನಿರ್ಮಾಣ ಮಾಡುತ್ತಿರುವ ನೂತನ ಚಲನಚಿತ್ರ ಒಡೆಯರ್ ಚಿತ್ರಕ್ಕೆ ಆರಂಭದಲ್ಲೇ ತೊಡಕು ಎದುರಾಗಿದೆ. ಒಡೆಯರ್ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕ ನಟನಾಗಿ ಅಭಿನಯಿಸುತ್ತಿದ್ದು, ಚಿತ್ರದ ಟೈಟಲ್ ಬದಲಾಯಿಸುವಂತೆ ಕನ್ನಡ ಕ್ರಾಂತಿದಳದ ಸಂಘಟನೆಯವರು ಕೆ.ಆರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯವರು, ಒಡೆಯರ್ ಎಂಬ ಪದ ಮೈಸೂರು ಅರಸರ ಸ್ವತ್ತು. ಅವರ ಮೇಲೆ ಅಪಾರವಾದ ಗೌರವ ಅಭಿಮಾನವಿದೆ. ರೌಡಿಸಂ, ಹಾಸ್ಯ ವ್ಯಾಪಾರಿ ಚಿತ್ರಗಳಿಗೆ ಒಡೆಯರ್ ಹೆಸರು ಇಡಲು ಬಿಡುವುದಿಲ್ಲ.    ಹಿಂದೆಯೇ ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಎಚ್ಚರಿಕೆ ನೀಡಿದ್ದರೂ ಸಹ ಮತ್ತೆ ಚಿತ್ರ ತಂಡದವರು ಒಡೆಯರ್ ಶೀರ್ಷಿಕೆಯನ್ನೇ ಇಟ್ಟುಕೊಂಡು .16ರಂದು ಚಲನಚಿತ್ರದ ಮುಹೂರ್ತವನ್ನು ಮೈಸೂರಿನಲ್ಲಿ ಏರ್ಪಡಿಸಿದ್ದಾರೆಂದು ತಿಳಿದು ಬಂದಿದೆ. ಕಾರಣದಿಂದ ವಾಣಿಜ್ಯ ಮಂಡಳಿ ಹಾಗೂ ಚಿತ್ರತಂಡದವರು ಒಡೆಯರ್ ಎಂಬ ಶೀರ್ಷಿಕೆಯನ್ನು ಬದಲಾಯಿಸಬೇಕೆಂದು ಒತ್ತಾಯಿಸಿ ದೂರು ಸಲ್ಲಿಸಿದ್ದೇವೆ ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಚಂದ್ರ ಗ್ರಹಣಕ್ಕೆ ಹೆದರಿ ಊರನ್ನೇ ತೊರೆದ ಗ್ರಾಮಸ್ಥರು