Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಸೇರಿ 28 ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಸಿದ್ದರಾಮಯ್ಯ ಸೇರಿ 28 ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಂಗಳೂರು , ಗುರುವಾರ, 4 ಮೇ 2017 (17:28 IST)
ಪೊಲೀಸ್ ಅಧಿಕಾರಿಗಳ ಅಕ್ರಮ ವರ್ಗಾವಣೆ ಆರೋಪದಡಿ ಸಿಎಂ ಸೇರಿ 28 ಸಚಿವರ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗಿದೆ. ಪೊಲೀಸ್ ಮಹಾಸಭಾದ ಅಧ್ಯಕ್ಷ. ವಿ. ಶಶಿಧರ್, ಹೈಕೋರ್ಟ್ ಸೂಚನೆ ಮೇರೆಗೆ ಲೋಕಾಯುಕ್ತರಿಗೆ ದೂರು ನೀಡಿದ್ದಾರೆ.
 

ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ದೂರುದಾರ ವಿ. ಶಶಿಧರ್ ಹೈಕೋರ್ಟ್`ನಲ್ಲಿ ದೂರು ದಾಖಲಿಸಿದ್ದರು. ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಲೋಕಾಯುಕ್ತಕ್ಕೆ ದೂರು ನೀಡುವಂತೆ ಆದೇಶಿಸಿತ್ತು.

 ಕಳೆದ ಡಿಸೆಂಬರ್`ನಲ್ಲಿ ನಡೆದ ವರ್ಗಾವಣೆಯಲ್ಲಿ 41 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆ ಕಾಯ್ದೆಗೆ ಸುಪ್ರೀಂಕೋರ್ಟ್ ಆದೇಶದನ್ವಯ ತಿದ್ದುಪಡಿಯಾಗಿದ್ದು, ಪೊಲೀಸ್ ಎಸ್ಟಾಬ್ಲೀಶ್ ಮೆಂಟ್ ಬೀರ್ಡ್ ಮೂಲಕ ವರ್ಗಾವಣೆ ಆಗಬೇಕಿತ್ತು. ಸಚಿವರ ಹಸ್ತಕ್ಷೇಪದಿಂದ ಕಾಯ್ದೆ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಪಿಸಿಸಿಗೆ 15 ದಿನದಲ್ಲಿ ನೂತನ ಅಧ್ಯಕ್ಷರ ನೇಮಕ: ಖರ್ಗೆ